ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ನೆರವೇರಿಸಿದ್ದಾರೆ.
ಇದನ್ನೂ ಓದಿ: ‘ಪೆಟ್ರೋಮ್ಯಾಕ್ಸ್’ ಎರಡನೇ ಹಂತದ ಚಿತ್ರೀಕರಣ ಶುರು …
ಈ ಸಂದರ್ಭದಲ್ಲಿ ನಿರ್ಮಾಪಕ ಮತ್ತು ಕೃಷಿ ಸಚಿವ ಬಿ.ಸಿ. ಪಾಟೀಲ್, ನಟ-ನಿರ್ಮಾಪಕ ರವಿಚಂದ್ರನ್, ನಟಿ ತಾರಾ, ಸಾ.ರಾ. ಗೋವಿಂದು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
ಮುನಿರತ್ನ ಅವರು ನಿರ್ಮಾಪಕರ ಸಂಘದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಕುಮಾರ ಪಾರ್ಕ್ನ ಗಾಂಧಿ ಭವನದ ಬಳಿ ಇರುವ ಜಾಗವನ್ನು ಸಂಘದ ವತಿಯಿಂದ ಖರೀದಿಸಿ, ಆ ಜಾಗದಲ್ಲಿ ಸಂಘಕ್ಕಾಗಿ ಒಂದು ಸ್ವಂತ ಕಟ್ಟಡವನ್ನು ಕಟ್ಟಿಸಬೇಕು ಎಂದು ಯೋಜನೆ ಹಾಕಿದ್ದರು. ಈ ಮಧ್ಯೆ, ಅವರ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಘದ ಕಟ್ಟಡವನ್ನು ಕಟ್ಟಿಸುವುದಕ್ಕೆ ಅವರಿಂದ ಸಾಧ್ಯವಾಗಲಿಲಲ್ಲ.
ಇದನ್ನೂ ಓದಿ: ಹುಟ್ಟುಹಬ್ಬದ ದಿನವೇ ತಂದೆಯಾದ ಪವನ್ ಒಡೆಯರ್ …
ಈಗ ಸಂಘದ ಅಧ್ಯಕ್ಷರಾಗಿರುವ ಪ್ರವೀಣ್ ಕುಮಾರ್ ಅವರು ಕಟ್ಟಡ ನಿರ್ಮಾಣ ಮಾಡುವುದಕ್ಕೆ ಒಂದು ಸಮಿತಿಯೊಂದನ್ನು ಸ್ಥಾಪಿಸಿದ್ದು, ಆ ಸಮಿತಿಯ ನೇತೃತ್ವದಲ್ಲಿ ಕಟ್ಟಡ ನಿರ್ಮಾಣವಾಗಲಿದೆ, ನಿರ್ಮಾಣ ಕಾರ್ಯವು ಶೀಘ್ರದಲ್ಲೇ ಶುರುವಾಗಲಿದ್ದು, ಮುಂದಿನ ವರ್ಷದ ಅಂತ್ಯದ ಹೊತ್ತಿಗೆ ಕಟ್ಟಡ ನಿರ್ಮಾಣ ಪೂರ್ಣವಾಗಲಿದೆ ಎಂದು ಅಂದಾಜಿಸಲಾಗಿದೆ.
ಡ್ರಗ್ ಮಾಫಿಯಾ ಬಳಿಕ ಇದೀಗ ಲ್ಯಾಂಡ್ ಮಾಫಿಯಾ ವಿರುದ್ಧ ಸಲ್ಮಾನ್ ಖಾನ್ ಧ್ವನಿ!