More

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ

    ಮಳವಳ್ಳಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಭಾನುವಾರ ಒಂದು ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಭೂಮಿಪೂಜೆ ನೆರವೇರಿಸಿದರು.

    ತಾಲೂಕಿನ ಸಾಗ್ಯ ಗ್ರಾಮ, ಚಿಲ್ಲಾಪುರ ಗೇಟ್ ಬಳಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಬೆಳಕವಾಡಿ ಮತ್ತು ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

    ಹಲಗೂರು ಗ್ರಾಪಂ ಅಧ್ಯಕ್ಷೆ ರಕ್ಷಿತಾ ಜೀವನ್, ಟಿ.ಕೆ.ಹಳ್ಳಿ ಗ್ರಾಪಂ ಅಧ್ಯಕ್ಷ ತೇಜುಕುಮಾರ್, ಸದಸ್ಯೆ ಸುಮಾ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲ್ಕುಣಿ ದೇವರಾಜು, ಜಿಪಂ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಮುಟ್ಟನಹಳ್ಳಿ ಅಂಬರೀಶ್, ಸಿದ್ದಲಿಂಗಸ್ವಾಮಿ, ನಿಟ್ಟೂರು ಮರಿಸ್ವಾಮಿ, ಹುಲ್ಲೇಗಾಲ ಶಿವಕುಮಾರ್, ಶಿವಮಾದೇಗೌಡ, ಡಿ. ಉಮೇಶ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts