ನವದೆಹಲಿ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಭೂಪೇಂದ್ರ ಪಟೇಲ್ಗೆ ಮತ್ತೊಮ್ಮೆ ಸಿಎಂ ಆಗುವ ಅವಕಾಶ ಒಲಿದಿದೆ.
ಡಿ.12ರಂದು ಅಹಮದಬಾದ್ನ ಮೋದಿ ಸ್ಟೇಡಿಯಂನಲ್ಲಿ ಸಿಎಂ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಗುಜರಾತ್ನಲ್ಲಿ ಸತತ 7ನೇ ಬಾರಿಯೂ ಬಿಜೆಪಿ ಗೆಲುವು ಸಾಧಿಸಿದ್ದು, ಈ ಗೆಲುವಿಗೆ ಬಿಜೆಪಿ ಕಾರ್ಯಕರ್ತರೇ ಕಾರಣ ಎಂದು ಭೂಪೇಂದ್ರ ಪಟೇಲ್ ಸಂತಸ ಹಂಚಿಕೊಂಡಿದ್ದಾರೆ. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ.
ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ. ಅವರ ಅಸಾಧಾರಣ ಪರಿಶ್ರಮವೇ ಈ ಐತಿಹಾಸಿಕ ಗೆಲುವಿಗೆ ಕಾರಣ. ಅಭಿವೃದ್ಧಿಗೆ ಗುಜರಾತಿಗರು ಮನ್ನಣೆ ನೀಡಿದ್ದಾರೆ. ನಮ್ಮನ್ನು ಆಶೀರ್ವದಿಸಿದ ಗುಜರಾತಿಗರಿಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದಾರೆ.
ಮೊರ್ಬಿ ಸೇತುವೆ ದುರಂತದ ವೇಳೆ ನದಿಗೆ ಜಿಗಿದು ಜನರನ್ನು ರಕ್ಷಿಸಿದ್ದ ಬಿಜೆಪಿ ಅಭ್ಯರ್ಥಿ ಗೆಲುವು
ಪಿಯು ಪಾಸಾದವರಿಗೆ ಕೇಂದ್ರ ಸರ್ಕಾರಿ ಹುದ್ದೆ: ಎಸ್ಎಸ್ಸಿಯಿಂದ 4,500 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ