ಚಿಟಗುಪ್ಪ: ತಮ್ಮನ ಸಾವಿನ ನೋವಿನ ಮಧ್ಯೆಯೂ ವಿದ್ಯಾರ್ಥಿನಿಯೊಬ್ಬಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರುವ ಘಟನೆ ತಾಳಮಡಗಿ ಗ್ರಾಮದಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕೀರ್ತನಾ ಪ್ರಶಾಂತ ಊರಿನ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ ಗುರುವಾರ ಇಂಗ್ಲಿಷ್ ಪರೀಕ್ಷೆ ಬರೆದಿದ್ದಾಳೆ. ಏಕೈಕ ಸಹೋದರ 7ನೇ ತರಗತಿ ಪರೀಕ್ಷೆ ಬರೆದಿದ್ದ ಕಾರ್ತಿಕ ಬುಧವಾರ ರಾತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದು, ಗುರುವಾರ ಅಂತ್ಯಕ್ರಿಯೆ ನೆರವೇರಿತು.
ಇದನ್ನೂ ಓದಿ: ವೈಭವದ ಐತಿಹಾಸಿಕ ಕರಗ ಮಹೋತ್ಸವ; ದ್ರೌಪದಿ ದೇವಿಯ ಕರಗ ಕಣ್ತುಂಬಿಕೊಳ್ಳಲು ಬಂದ ಸಾವಿರಾರು ಭಕ್ತರು
ತಮ್ಮನ ಸಾವಿನ ದುಃಖದಲ್ಲಿದ್ದ ಈಕೆ ಪರೀಕ್ಷೆ ಬರೆಯಲು ನಿರಾಕರಿಸಿದ್ದಳು. ಬೆಳಗ್ಗೆ ವಿಷಯ ಗೊತ್ತಾಗುತ್ತಿದ್ದಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಸುರೇಶ ಕಟ್ಟಿಮನಿ, ಕಸ್ಟೋಡಿಯನ್ ಮಲ್ಲಪ್ಪ ಜಿಗಜೀವಣಿ ಬಾಲಕಿ ತಂದೆ ಸೇರಿ ಸಂಬಂಧಿಕರ ಮನವೊಲಿಸಿದ್ದರ ಫಲವಾಗಿ ದುಃಖದ ಮಧ್ಯೆಯೂ ಕೀರ್ತನಾ ಪರೀಕ್ಷೆ ಬರೆದ ನಂತರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದಳು.
ಕೆ.ಆರ್. ಪೇಟೆ ಕಾಂಗ್ರೆಸ್ ಟಿಕೆಟ್: ಒಂದೇ ಕಲ್ಲಲ್ಲಿ ಮೂರು ಹಕ್ಕಿ ಹೊಡೆದ ಮಾಜಿ ಸಿಎಂ ಸಿದ್ದು!