ಶಾದಿಭಾಗ್ಯ ಯೋಜನೆಗೆ ಗುಡ್ ಬೈ?: ಅರ್ಜಿ ಸ್ವೀಕಾರ ತಕ್ಷಣದಿಂದಲೇ ಸ್ಥಗಿತಗೊಳಿಸಲು ಸೂಚನೆ

blank

ಬೆಂಗಳೂರು: ಶಾದಿಭಾಗ್ಯ (ಬಿದಾಯಿ) ಯೋಜನೆಯಡಿ ಅರ್ಜಿ ಸ್ವೀಕರಿಸುವುದನ್ನು ತಕ್ಷಣದಿಂದಲೇ ಸ್ಥಗಿತಗೊಳಿಸುವಂತೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸೂಚನೆ ಹೊರಡಿಸಿದೆ.

ಬಜೆಟ್​ನಲ್ಲಿ ಶಾದಿಭಾಗ್ಯ ಯೋಜನೆಗೆ ಅನುದಾನ ನಿಗದಿ ಪಡಿಸದ ಹಿನ್ನೆಲೆಯಲ್ಲಿ ಸದ್ಯಕ್ಕೆ ಅರ್ಜಿ ಸ್ವೀಕರಿಸುವುದು ಬೇಡ ಎಂದು ತಿಳಿಸಲಾಗಿದೆ. ಮಂಜೂರು ಮಾಡಲು ಬಾಕಿ ಇರುವ ಅರ್ಹ ಅರ್ಜಿಗಳ ಮಾಹಿತಿ ಮಾರ್ಚ್ 9ರೊಳಗೆ ಸಲ್ಲಿಸುವಂತೆ ಸೂಚನೆ

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಶಾದಿಭಾಗ್ಯ ಯೋಜನೆ ಜಾರಿಗೆ ಬಂದಿತ್ತು. ಈ ಶಾದಿಭಾಗ್ಯ ಯೋಜನೆ ವಿರುದ್ಧ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ಸದನದ ಒಳಗೆ ಮತ್ತು ಹೊರಗೆ ತೀವ್ರ ಹೋರಾಟ ನಡೆಸಿತ್ತು.

ಯಾರಿಗೆ ಶಾದಿ ಭಾಗ್ಯ?: ಅಲ್ಪಸಂಖ್ಯಾತ ಸಮುದಾಯಗಳ ವಾರ್ಷಿಕ 1.50 ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವ ಕುಟುಂಬಗಳ ಹೆಣ್ಣುಮಕ್ಕಳಿಗೆ ಶಾದಿ ಭಾಗ್ಯ ಯೋಜನೆ ಅನ್ವಯವಾಗುತ್ತಿತ್ತು. ಲಗ್ನಪತ್ರಿಕೆ ಮತ್ತು ಇತರ ದಾಖಲೆ ಸಲ್ಲಿಸಿದರೆ ಮದುವೆ ದಿನದಂದು ವಧುವಿನ ಖಾತೆಗೆ ಹಣ ಸಂದಾಯವಾಗುತ್ತಿತ್ತು.

ಮದುವೆ ಆದ ಬಳಿಕ ವಧು-ವರನ ಭಾವಚಿತ್ರ, ಧಾರ್ವಿುಕ ಸಂಸ್ಥೆ ನೀಡಿರುವ ಮದುವೆ ಪ್ರಮಾಣಪತ್ರ ಅಥವಾ ಉಪನೋಂದಣಾಧಿಕಾರಿಗಳು ನೀಡಿರುವ ಮದುವೆ ನೋಂದಣಿ ಪತ್ರ ಪಡೆದು ಸಲ್ಲಿಸಬೇಕು ಎಂಬ ನಿಯಮವಿತ್ತು. ಜಿಲ್ಲಾ ಅಲ್ಪಸಂಖ್ಯಾತ ಇಲಾಖೆ ಮೂಲಕ ಅನುದಾನ ಪಡೆಯಬಹುದಾಗಿದ್ದು, ಸಲ್ಲಿಕೆಯಾದ ಅರ್ಜಿಯಲ್ಲಿ ಅತೀ ಕಡಿಮೆ ಆದಾಯವಿರುವ ಫಲಾನುಭವಿಗೆ ಅನುದಾನ ಲಭ್ಯತೆ ಆಧಾರದಲ್ಲಿ ಹಣ ಬಿಡುಗಡೆ ಮಾಡಿಕೊಡಲಾಗುತ್ತಿತ್ತು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…