ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತನಟ ಪುನೀತ್ ರಾಜಕುಮಾರ್ ಅವರ ಅಗಲಿಕೆಯ ಹಿನ್ನೆಲೆಯಲ್ಲಿ ಭಾನುವಾರ ರಾಜ್ಯಾದ್ಯಂತ ಏಕಕಾಲಕ್ಕೆ ಬೃಹತ್ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ.
ಕನ್ನಡ ಚಿತ್ರಪ್ರದರ್ಶಕರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ‘ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಬಾಷ್ಪಾಂಜಲಿ’ ಎಂಬ ಹೆಸರಿಡಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತದ ಚಿತ್ರಪ್ರದರ್ಶಕರ ಜೊತೆಗೆ ಅಲ್ಲಿನ ಸಿಬ್ಬಂದಿ ವರ್ಗ ಮಾತ್ರವಲ್ಲದೆ ಚಲನಚಿತ್ರ ಪ್ರೇಕ್ಷಕರು, ಅಭಿಮಾನಿಗಳು ಕೂಡ ಕೈಜೋಡಿಸಲಿದ್ದಾರೆ.
ನ.7ರ ಭಾನುವಾರ ಸಂಜೆ 6 ಗಂಟೆಗೆ ಸರಿಯಾಗಿ ರಾಜ್ಯದ ಎಲ್ಲ ಚಿತ್ರಮಂದಿರಗಳ ಆವರಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಹೂವು, ದೀಪ, ಗೀತನಮನಗಳ ಮೂಲಕ ಪುನೀತ್ ರಾಜಕುಮಾರ್ ಅವರಿಗೆ ಬಾಷ್ಪಾಂಜಲಿ ಅರ್ಪಿಸಲಾಗುವುದು ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ಜೊತೆಗಿದ್ದ ಗೆಳೆಯರೇ ಒಟ್ಟಿಗೇ ಉಂಡು, ಕೊಂದರು; ಡ್ರಗ್ಸ್ ನಶೆ, ಹಣದ ಆಸೆಗೆ ಬಿದ್ದು ಅಪಹರಿಸಿ ಕೊಲೆ ಮಾಡಿದ್ರು..
ಗೀತಾಂಜಲಿ: ಅಪ್ಪು ಅವರಿಗೆ ಗೀತನಮನ ಮೂಲಕ ಶ್ರದ್ಧಾಂಜಲಿ ಸಲ್ಲಿಸಲೆಂದೇ ಖ್ಯಾತ ಚಿತ್ರಸಾಹಿತಿ ಡಾ.ವಿ.ನಾಗೇಂದ್ರ ಪ್ರಸಾದ್ ಅವರು ವಿಶೇಷವಾದ ಗೀತೆಯೊಂದನ್ನು ರಚಿಸಿದ್ದಾರೆ. ʼಬೆಳ್ಳಿ ಬಾನಿನಲ್ಲಿ ಸೇರಿ ಹೋದೆ ಅಪ್ಪು..ʼ ಎಂದು ಆರಂಭವಾಗುವ ಈ ಗೀತೆಯನ್ನು ಭಾನುವಾರ ಸಂಜೆ ಎಲ್ಲ ಚಿತ್ರಮಂದಿರಗಳ ಆವರಣದಲ್ಲಿ ಸಾಮೂಹಿಕವಾಗಿ ಹಾಡಲಾಗುವುದು. ಬಳಿಕ 2 ನಿಮಿಷಗಳ ಮೌನಪ್ರಾರ್ಥನೆ ಮೂಲಕ ಪುನೀತ್ ರಾಜಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಲಾಗುವುದು ಎಂದು ಕೆ.ವಿ.ಚಂದ್ರಶೇಖರ ಅವರು ತಿಳಿಸಿದ್ದಾರೆ.
ಪುನೀತ್ ರಾಜಕುಮಾರ್ ಸಾವಿನ ಕುರಿತು ಮತ್ತೊಂದು ಅನುಮಾನ!?; ತನಿಖೆಗೆ ಆಗ್ರಹಿಸಿ ಪೊಲೀಸ್ ಠಾಣೆಗೂ ದೂರು…