ಬೆಂಗಳೂರು: ರಾಜ್ಯದಲ್ಲಿರುವ ನಿರುದ್ಯೋಗಿಗಳಿಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಸದಾನಂದ ಗೌಡ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಬೃಹತ್ ಉದ್ಯೋಗ ಮೇಳ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ.
ಇದೇ ತಿಂಗಳ 15ನೇ ತಾರೀಕಿನಂದು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಬೆಂಗಳೂರಿನ ಎಸ್.ಜಿ ಇಂಟರ್ನ್ಯಾಷನಲ್ ಸ್ಕೂಲ್ ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಬಯಸುವವರು http://bangaloreudyogamela.in ವೆಬ್ಸೈಟ್ನಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅಥವಾ 0806197858 ನಂಬರಿಗೆ ಮಿಸ್ ಕಾಲ್ ಕೊಡುವ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ಸಚಿವರು ತಿಳಿಸಿದ್ದಾರೆ. (ಏಜೆನ್ಸೀಸ್)
ಮಾರ್ಚ್ 15ರಂದುನಡೆಯುವ ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಿ. ಇದರಲ್ಲಿ ಪಾಲ್ಗೊಳ್ಳಲು https://t.co/orVHY0zzbS ವೆಬ್ಸೈಟಿನಲ್ಲಿ ಹೆಸರು ನೋಂದಾಯಿಸಿ ಅಥವಾ 0806197858 ಈ ನಂಬರಿಗೆ ಮಿಸ್ಡ್ ಕಾಲ್ ಮಾಡಿ. https://t.co/jV3doavrXl pic.twitter.com/onnSsQuy4g
— Sadananda Gowda (@DVSadanandGowda) March 9, 2020
ಪಾಕ್ ಪರ ಘೋಷಣೆ ಕೂಗಿದ್ದ ಮೂವರು ವಿದ್ಯಾರ್ಥಿಗಳಿಗೆ ಇಲ್ಲ ಬಿಡುಗಡೆ; ಜಾಮೀನು ಅರ್ಜಿ ವಜಾ