More

    ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್; ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ.. ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2C, 2D ಮೀಸಲಾತಿ ವಿಚಾರದಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ. ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ ಎಂದು ಹೈಕೋರ್ಟ್ ಮಧ್ಯಂತರ ಆದೇಶ ತೆರವುಗೊಳಿಸಿದೆ. ಈ ಹಿಂದೆ ಹೈಕೋರ್ಟ್ ಮುಖ್ಯ ನ್ಯಾಯಪೀಠ ನೀಡಿದ್ದ ಯಥಾಸ್ಥಿತಿ ಆದೇಶವನ್ನು ತೆರವುಗೊಳಿಸಿದೆ.

    ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿ ಬುಸುಗುಟ್ಟಿದ 6 ಅಡಿ ಉದ್ದ ವಿಷಕಾರಿ ಹಾವು!
    ಪಂಚಮಸಾಲಿಗೆ 2A ಮೀಸಲಾತಿ ನೀಡದಂತೆ ಡಿ.ಜಿ ರಾಘವೇಂದ್ರ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವು ಮಾಡಿದೆ.

    ಇದನ್ನೂ ಓದಿ: ಬಿಯರ್ ಮೇಲೆ 10 ರೂ. ಹೆಚ್ಚುವರಿ ವಸೂಲಿ ಮಾಡಿದ್ದವನಿಗೆ ಜೈಲು..!
    ಈ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಆದೇಶ ತೆರವು ಮಾಡಿದೆ. ಇದರಿಂದಾಗಿ ಪಂಚಮಸಾಲಿಗೆ 2C, 2D ಮೀಸಲಾತಿ ಕಲ್ಪಿಸಲು ಯಾವುದೇ ಅಡ್ಡಿ ಇಲ್ಲದಂತೆ ಆಗಿದೆ. ಇದರೊಂದಿಗೆ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕು ಎಂದು ಸೂಚಿಸಿದೆ.

    ಹೆಣ್ಣು, ಹೊನ್ನು, ಮಣ್ಣು ಸಿಗಬೇಕು ಅಂದ್ರೆ ಪುಣ್ಯ ಬೇಕು; ಆನಂದ್ ಸಿಂಗ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts