More

    ಕರೊನಾ ಲಾಕ್​ಡೌನ್​ ನಿಯಮ ಉಲ್ಲಂಘಿಸಿದವರಿಗೆ ಬಿಗ್​ರಿಲೀಫ್​? ದೂರು ವಾಪಸ್​ ಪಡೆಯಲು ಸರ್ಕಾರ ಚಿಂತನೆ

    ತುಮಕೂರು: ಕರೊನಾ ಲಾಕ್​ಡೌನ್​ ಸಂದರ್ಭದಲ್ಲಿ ರಸ್ತೆಗಿಳಿದ ಸಾರ್ವಜನಿಕರ ಮೇಲೆ ದಾಖಲಾದ ದೂರುಗಳನ್ನು ವಾಪಸ್​ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ.

    ಈ ಕುರಿತು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾಹಿತಿ ನೀಡಿದ್ದಾರೆ. ಚಿಕ್ಕನಾಯಕನಹಳ್ಳಿಯಲ್ಲಿ ಪೊಲೀಸ್​ ಠಾಣೆ ಕಟ್ಟಡ ಉದ್ಘಾಟಿಸಲು ಬುಧವಾರ ಆಗಮಿಸಿದ್ದ ಮಾಧುಸ್ವಾಮಿ, ಈ ವೇಳೆ ಮಾತನಾಡುತ್ತಾ ಕರೊನಾ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿರುವ ಸಾವಿರಾರು ಪ್ರಕರಣಗಳು ನ್ಯಾಯಾಲಯದಲ್ಲಿ ಒತ್ತಡಕ್ಕೆ ಕಾರಣವಾಗಿವೆ ಎಂದರು.

    ಕರೊನಾ ನಿಬಂಧಗಳನ್ನು ಉಲ್ಲಂಘನೆ ಮಾಡಿದ ಸಾರ್ವಜನಿಕರ ವಿರುದ್ಧ ದಾಖಲಿಸಲಾಗಿದ್ದ ಮೊಕದ್ದಮೆಗಳನ್ನು ಹಿಂತೆಗೆಯುವ ಅಗತ್ಯವಿದೆ. ಇದರಿಂದ ಪೊಲೀಸ್​ ಇಲಾಖೆ, ಸಾರ್ವಜನಿಕರೂ ಮತ್ತು ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ದೂರುಗಳನ್ನು ವಾಪಸ್​ ಪಡೆಯಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮಾಧುಸ್ವಾಮಿ ತಿಳಿಸಿದರು.

    ಚಿನ್ನದ ವ್ಯಾಮೋಹಕ್ಕೆ ಭೂಮಿ ಹೋಯ್ತು! 20 ಲಕ್ಷ ರೂಪಾಯಿಗೆ 8 ಕೆಜಿ ಚಿನ್ನದ ಆಮಿಷ… ಸಂಕಷ್ಟದಲ್ಲಿ ದಂಪತಿ…

    ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts