ಪಟನಾ: ದೇಶಾದ್ಯಂತ ಕರೊನಾ ಅಬ್ಬರ ಹೆಚ್ಚಾಗಿದ್ದು, ಬಿಹಾರದ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಸಿಂಗ್ ಶುಕ್ರವಾರದಂದು ಸೋಂಕಿಗೆ ಬಲಿಯಾಗಿದ್ದಾರೆ.
ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಅರುಣ್ ಕುಮಾರ್ ಸಿಂಗ್ ಕಳೆದ ಕೆಲ ದಿನಗಳ ಹಿಂದೆ ಕರೊನಾ ಸೋಂಕಿಗೆ ತುತ್ತಾಗಿದ್ದರು. ಪಟನಾದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಹೆಚ್ಚು ಹದಗೆಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಕ್ಯಾಬಿನೆಟ್ನಲ್ಲಿದ್ದಾಗಲೇ ಮುಖ್ಯಮಂತ್ರಿ ನಿತೀಶ್ ಕುಮಾರ್ಗೆ ಈ ವಿಚಾರ ತಿಳಿದಿದ್ದು, ಹಿರಿಯ ಅಧಿಕಾರಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.
ಅರುಣ್ ಕುಮಾರ್ ಅವರು 1985ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದರು. 2021ರ ಫೆಬ್ರವರಿಯಲ್ಲಿ ಅವರನ್ನು ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.
ಅರುಣ್ ಕುಮಾರ್ ಅವರ ಅಂತ್ಯ ಸಂಸ್ಕಾರವನ್ನು ರಾಜ್ಯ ಸರ್ಕಾರದ ಸಕಲ ಗೌರವದೊಂದಿಗೆ ನಡೆಸುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್)
ಕರೊನಾ ಗೆದ್ದ ರಾಯಚೂರಿನ 97 ವರ್ಷದ ವೃದ್ದೆ! ಆತ್ಮಸ್ಥೈರ್ಯ ಮುಖ್ಯವೆಂದ ವೈದ್ಯರು