ಕೋಲ್ಕತ: ಕಳ್ಳತನ ಪ್ರಕರಣದ ತನಿಖೆಗೆಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಬಿಹಾರದ ಪೊಲೀಸ್ ಅಧಿಕಾರಿಯನ್ನು ಗ್ರಾಮಸ್ಥರ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಬಂಗಾಳದ ಉತ್ತರ ದಿನಾಜ್ಪುರದಲ್ಲಿ ನಡೆದಿದೆ.
ಬಿಹಾರದ ಕಿಶಾನ್ಗಂಜ್ ಪೊಲೀಸ್ ಠಾಣೆಯ ಸ್ಟೇಸನ್ ಹೌಸ್ ಆಫೀಸರ್ ಅಶ್ವಿನ್ ಕುಮಾರ್ ಮೃತ ದುರ್ದೈವಿ. ಉತ್ತರ ದಿನಾಜ್ಪುರ್ನ ಗೋಲ್ಪೋಖರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಗ್ರಾಮದ ಗುಂಪೊಂದು ಅಶ್ವಿನ್ ಅವರನ್ನು ಹಿಡಿದು ಥಳಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ.
ಅಶ್ವಿನ್ ಅವರು ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಡ್ ಮಾಡಲು ಗ್ರಾಮಕ್ಕೆ ಬಂದಿದ್ದಾಗ ಘಟನೆ ನಡೆದಿದೆ. ಇಸ್ಲಾಂಪುರ್ ಎಸ್ಪಿ ನಮ್ಮೊಂದಿಗಿದ್ದಾರೆ. ಅಶ್ವಿನ್ ಮೇಲೆ ದಾಳಿ ಮಾಡಿದವರನ್ನು ನಾವು ಬಂಧಿಸುತ್ತೇವೆ ಎಂದು ಐಜಿ ಪೂರ್ನಿಯಾ ರೇಂಜ್ ಹೇಳಿದ್ದಾರೆ.
ಇದನ್ನೂ ಓದಿರಿ: ರಮೇಶ್ ಜಾರಕಿಹೊಳಿ ಅಪಾರ್ಟ್ಮೆಂಟ್ನಲ್ಲಿದೆ ಸೀಕ್ರೆಟ್ ಡೋರ್! ಸ್ಫೋಟಕ ರಹಸ್ಯ ಬಯಲು
ಅಶ್ವಿನ್ ಅವರು ಖದೀಮನಿಗಾಗಿ ಹುಡುಕಾಡುವಾಗ ಅವರಿಗೆ ಸ್ಥಳೀಯ ಪೊಲೀಸರ ನೆರವು ಸಿಗಲಿಲ್ಲ. ಹೀಗಾಗಿ ಏಕಾಂಗಿಯಾಗಿ ಕಾರ್ಯಾಚರಣೆಗೆ ಇಳಿದಿದ್ದೇ ಅವರಿಗೆ ಮುಳುವಾಯಿತು ಎಂದು ಹೇಳಲಾಗುತ್ತಿದೆ. ಸದ್ಯ ಘಟನೆ ಸಂಬಂಧ ಓರ್ವ ಆರೋಪಿಯನ್ನು ಪಂಜಿಪರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ತೆರಳುವ ಮುನ್ನ ಅಶ್ವಿನ್ ಅವರು ಬಂಗಾಳದ ಸ್ಥಳೀಯ ಪೊಲೀಸ್ ಠಾಣೆಯ ನೆರವು ಕೇಳಿದ್ದರು. ಅವರು ಸಹ ಒಂದು ತಂಡವನ್ನು ಕಳುಹಿಸಿಕೊಡುವುದಾಗಿ ಒಪ್ಪಿಕೊಂಡಿದ್ದರು. ಆದರೆ, ತಮ್ಮ ಮಾತನ್ನು ಅವರು ಉಳಿಸಿಕೊಳ್ಳಲಿಲ್ಲ ಎಂದು ಬಿಹಾರ ಪೊಲೀಸ್ ಅಸೋಸಿಯೇಷನ್ ತನ್ನ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದೆ.
ಆದಾಗ್ಯು ಅಶ್ವಿನ್ ಅವರು ಉತ್ತರ ದಿನಾಜ್ಪುರದ ಗ್ರಾಮಕ್ಕೆ ಅಶ್ವಿನ್ ಭೇಟಿ ನೀಡಿದಾಗ ಗ್ರಾಮಸ್ಥರು ಅಶ್ವಿನ್ ಮೇಲೆ ದಂಡ ಮತ್ತು ಕಲ್ಲುಗಳಿಂದ ದಾಳಿ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. (ಏಜೆನ್ಸೀಸ್)
4 ರಾಜ್ಯಗಳಲ್ಲಿ ಮತದಾನ ಮುಗಿದ ಮೇಲೆ ಬಂತು ಚುನಾವಣಾ ಆಯೋಗದ ಕರೊನಾ ಎಚ್ಚರಿಕೆ !
ರೈಲು ನಿಲ್ದಾಣದಲ್ಲಿ ನೀರು ತರಲು ಹೋದ ಪತ್ನಿ ಮರಳಲೇ ಇಲ್ಲ: ಸಿಸಿಟಿವಿ ನೋಡಿದ ಪತಿಗೆ ಶಾಕ್!
ರಾತ್ರೋರಾತ್ರಿ ಸ್ಟಾರ್ ಆದ ಬಳಿಕ ಅನುಭವಿಸಿದ ನೋವಿನ ಕತೆ ಬಿಚ್ಚಿಟ್ಟ ಆರ್ಸಿಬಿ ಗರ್ಲ್..!