ಪಟನಾ: ದೂರು ನೀಡಲು ಬಂದ ಶಿಕ್ಷಕನಿಗೆ ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ಹಾಕಿರುವ ಆತಂಕಕಾರಿ ಘಟನೆ ಬಿಹಾರ ರಾಜಧಾನಿ ಪಟನಾದ ಜಮುಯಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಒಂದು ಸೆಕೆಂಡ್ನಲ್ಲಿ ನಿನ್ನನ್ನು ಭಯೋತ್ಪಾದಕ ಎಂದು ಘೋಷಿಸುತ್ತೇವೆ ಎಂದು ಪೊಲೀಸ್ ಅಧಿಕಾರಿ ಶಿಕ್ಷಕನಿಗೆ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಘಟನೆ ಎರಡ್ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೌಟುಂಬಿಕ ವಿವಾದವನ್ನು ಇತ್ಯರ್ಥ ಪಡಿಸಿಕೊಳ್ಳಲು ಶಿಕ್ಷಕ ಸೇರಿದಂತೆ ಆತನ ಇಡೀ ಕುಟುಂಬದ ಸದಸ್ಯರು ಪೊಲೀಸ್ ಠಾಣೆಗೆ ಹೋಗಿದ್ದರು. ಈ ವೇಳೆ ರಾಜೇಶ್ ಶರಣ್ ಹೆಸರಿನ ಪೊಲೀಸ್ ಅಧಿಕಾರಿ ಮತ್ತು ಮಫ್ತಿಯಲ್ಲಿದ್ದ ಇತರ ಪೊಲೀಸ್ ಸಿಬ್ಬಂದಿ ಶಿಕ್ಷಕನ ಸುತ್ತ ಕುಳಿತಿದ್ದರು. ಈ ವೇಳೆ ತಾಳ್ಮೆ ಕಳೆದುಕೊಂಡು ದಿಢೀರನೇ ತಾನು ಕೂತಿದ್ದ ಕುರ್ಚಿಯಿಂದ ಎದ್ದ ರಾಜೇಶ್ ಶರಣ್, ಶಿಕ್ಷಕನಿಗೆ ಬೆರಳು ತೋರಿಸಿ ಬೆದರಿಕೆ ಹಾಕಿದರು.
ಇದನ್ನೂ ಓದಿ: ಚಿತ್ತಾಪುರ ತಹಸೀಲ್ದಾರ್ ಕಚೇರಿಯಲ್ಲಿ ಗುಂಡು ಹಾರಿಸಿಕೊಂಡು ಪ್ರಾಣ ಬಿಟ್ಟ ಪೊಲೀಸ್ ಕಾನ್ಸ್ಟೆಬಲ್
ಘೋಷಿಸುವುದು ನಮ್ಮ ಕೆಲಸ
ಜನರನ್ನು ಭಯೋತ್ಪಾದಕರು ಎಂದು ಘೋಷಿಸುವುದು ನಮ್ಮ ಕೆಲಸ. ಒಂದೇ ಸೆಕೆಂಡ್ನಲ್ಲಿ ನಿನ್ನನ್ನು ಭಯೋತ್ಪಾದಕ ಎಂದು ಘೋಷಣೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿರುವುದು ವಿಡಿಯೋದಲ್ಲಿ. ಇಷ್ಟಾದರೂ ಅಲ್ಲಿದ್ದ ಜನರು ಪ್ರತಿರೋಧ ತೋರದೇ ಸುಮ್ಮನಿದ್ದರು. ಇದೀಗ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಪೊಲೀಸ್ ಅಧಿಕಾರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ ಮತ್ತು ಕಠಿಣ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. (ಏಜೆನ್ಸೀಸ್)
ವಿಡಿಯೋ ಕೃಪೆ: ಎನ್ಡಿಟಿವಿ ಟ್ವಿಟರ್
#Watch | "तुम पर काल मंडरा रहा": बिहार के पुलिसवाले का टीचर को धमकी देने का VIDEO वायरलhttps://t.co/H6sTFrXNxO pic.twitter.com/oL9TyER4w6
— NDTV India (@ndtvindia) May 3, 2023
ಈಗ ರೀಲ್ಗಳನ್ನು ಕಸ್ಟ್ಮೈಸ್ ಮಾಡಬಹುದು…! ಏನಿದು ಹೊಸ ಫೇಸ್ಬುಕ್ ಆಯ್ಕೆ?
Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!
ಗುರಿ ಇರಲಿ… ರಾಜ್ಯ ಚುನಾವಣೆಯನ್ನು ಮಹಾಭಾರತಕ್ಕೆ ಹೋಲಿಸಿದ ಪ್ರಿಯಾಂಕಾ ಗಾಂಧಿ