ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವು

blank

ವಿಜಯವಾಣಿ ಸುದ್ದಿಜಾಲ ಕಿನ್ನಿಗೋಳಿ

ಕಿನ್ನಿಗೋಳಿ ಬಟ್ಟಕೋಡಿ ಪೆಟ್ರೋಲ್ ಬಂಕ್ ಬಳಿ ಸೋಮವಾರ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿದ್ದಾರೆ. ಮೂಲತಃ ಧಾರವಾಡ ಜಿಲ್ಲೆ ಸವದತ್ತಿ ಕಲ್ಲೂರು ನಿವಾಸಿಗಳಾದ ನವೀನ್(26) ಹಾಗೂ ಆತ್ಮಾನಂದ(27) ಮೃತರು.

ಕಿನ್ನಿಗೋಳಿ ಸಮೀಪದ ಪದ್ಮನ್ನೂರು ಹಾಗೂ ಮೂಲ್ಕಿಯಲ್ಲಿ ವಾಸವಿದ್ದ ಇವರು ಪದ್ಮನ್ನೂರಿನಿಂದ ಕಿನ್ನಿಗೋಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಬಟ್ಟಕೋಡಿ ಪೆಟ್ರೋಲ್ ಬಂಕ್ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ವೇಳೆ ಮೃತಪಟ್ಟಿದ್ದಾರೆ.

ನವೀನ್ ಹಾಗೂ ಆತ್ಮಾನಂದ ಪದ್ಮನ್ನೂರು ಬಳಿ ರೆಡಿಮೇಡ್ ಆವರಣ ಗೋಡೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ನವೀನ್ ಕುಮಾರ್ ವಿವಾಹಿತರಾಗಿದ್ದು, ಆತ್ಮಾನಂದ ಅವಿವಾಹಿತರಾಗಿದ್ದರು. ಬೈಕ್ ಡಿಕ್ಕಿಯಾದ ಪರಿಣಾಮ ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಹಾಗೂ ಕಿನ್ನಿಗೋಳಿ ವಿಭಾಗದ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೂರು ದಿನದಲ್ಲಿ ಎರಡು ಅಪಘಾತ:

ಮೂರು ದಿನದ ಅಂತರದಲ್ಲಿ ಇಲ್ಲಿ ಎರಡು ಅಪಘಾತ ಸಂಭವಿಸಿದ್ದು, ಮೂವರು ಜೀವ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಮತ್ತು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ವಸಂತ್‌ರಾಜ್ ಭೇಟಿ ನೀಡಿದರು. ಬಟ್ಟಕೋಡಿಯಿಂದ ಐಕಳವರೆಗೆ ಸೂಚನಾ ಫಲಕ ಮತ್ತು ಅಗತ್ಯ ಸ್ಥಳಗಳಲ್ಲಿ ರಸ್ತೆ ಉಬ್ಬು ನಿರ್ಮಿಸುವಂತೆ ಪೊಲೀಸರು ಲೋಕೋಪಯೋಗಿ ಇಂಜಿನಿಯರ್‌ಗೆ ಮನವಿ ಮಾಡಿದ್ದಾರೆ.

ಮೇಲ್ಸೇತುವೆ ಕೆಳಗಡೆ ವ್ಯಾಪಾರಿಗಳದ್ದೇ ಅಬ್ಬರ : ತೊಕ್ಕೊಟ್ಟು ಪೇಟೆ ಅಂದಗೆಡಿಸುತ್ತಿರುವ ಬೀದಿ ವ್ಯಾಪಾರ

ಯೋಗಾಭ್ಯಾಸದಿಂದ ಲವಲವಿಕೆ ಜೀವನ ಸಾಧ್ಯ : ಯೋಗ ಗುರು ಜಯ ಮುದ್ದು ಶೆಟ್ಟಿ ಅಭಿಪ್ರಾಯ

Share This Article

ಈ ಗುಣಗಳನ್ನು ಹೊಂದಿರುವ ಜನರು ತಮ್ಮ ಜೀವನದುದ್ದಕ್ಕೂ ಶ್ರೀಮಂತರಾಗಿರುತ್ತಾರೆ..ಯಾಕೆ ಗೊತ್ತಾ?Chanakya Niti

Chanakya Niti: ಆಚಾರ್ಯ ಚಾಣಕ್ಯ ಅವರನ್ನು ಅವರ ಕಾಲದ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದೂ ಕರೆಯಲಾಗುತ್ತದೆ.…

ಬೇಸಿಗೆಯಲ್ಲಿ ತೆಂಗಿನಕಾಯಿ ನೀರು ಅಥವಾ ಕಬ್ಬಿನ ಜ್ಯೂಸ್​ ಯಾವುದು ಉತ್ತಮ! | Better In Summer

Better In Summer ; ಈ ಬಿರು ಬೇಸಿಗೆಯಲ್ಲಿ ಸಾಮಾನ್ಯವಾಗಿ ತಂಪಾದ ಅಥವಾ ಅಹ್ಲಾದಕಾರ ಆಹಾರ…

ಈ ಹಣ್ಣುಗಳನ್ನು ತಿಂದ ತಕ್ಷಣ ನೀರು ಕುಡಿಯಬೇಡಿ! ಅಕಸ್ಮಾತ್​ ನೀರು ಕುಡಿದ್ರೆ ಏನಾಗುತ್ತದೆ ಗೊತ್ತಾ? Fruits

Fruits: ಕೆಲವು ಸಂದರ್ಭಗಳಲ್ಲಿ, ಕೆಲವು ಹಣ್ಣುಗಳನ್ನು ತಿಂದ ನಂತರ ನೀರು ಕುಡಿಯುವುದರಿಂದ ಅತಿಸಾರದ ಅಪಾಯ ಹೆಚ್ಚಾಗುತ್ತದೆ.…