ಚಿಕ್ಕಮಗಳೂರು: ಲಾಕ್ಡೌನ್ ಸಂದರ್ಭ ಬೈಕ್ನಲ್ಲಿ ಹೊರಗೆ ಬಂದಿದ್ದ ವ್ಯಕ್ತಿಯೊಬ್ಬರು ಕಂದಕಕ್ಕೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ದುರಂತವೆಂದರೆ ಅಪಘಾತವಾಗಿ ವ್ಯಕ್ತಿ ಮೃತಪಟ್ಟು ಸುಮಾರು 20 ಗಂಟೆಗಳ ಬಳಿಕ ವಿಷಯ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಜಿಲ್ಲೆ ಸಂಪ್ಲಿ ಗ್ರಾಮದ ರಂಜಿತ್ (33) ಮೃತಪಟ್ಟ ಬೈಕ್ ಸವಾರ.
ಚಿಕ್ಕಮಗಳೂರು ಜಿಲ್ಲೆ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕಸಾಲೆ ಗ್ರಾಮದ ಸಮೀಪ ಈ ಅಪಘಾತ ಸಂಭವಿಸಿದೆ. ರಂಜಿತ್ ಬೈಕ್ ಸಮೇತ 6 ಅಡಿ ಕಂದಕಕ್ಕೆ ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುಮಾರು 20 ಗಂಟೆಗಳ ಹಿಂದೆ ಅಂದರೆ ಭಾನುವಾರ ರಾತ್ರಿ ಈ ಅಪಘಾತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಲಾಕ್ಡೌನ್ ಕಾರಣಕ್ಕೆ ವಾಹನ ಸಂಚಾರ ಇರದ್ದರಿಂದ ಈ ಅಪಘಾತದ ಬಗ್ಗೆ ತಕ್ಷಣ ಯಾರಿಗೂ ಗೊತ್ತಾಗಿರಲಿಲ್ಲ. ಇಂದು ಸಂಜೆ ಸ್ಥಳೀಯರಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಅವರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪತಿಯನ್ನು ಹೋಮಕುಂಡದಲ್ಲಿ ಹಾಕಿ ಕೊಲೆ ಮಾಡಿದ್ದ ಪತ್ನಿ; ಬೆಚ್ಚಿಬೀಳಿಸಿದ್ದ ಹತ್ಯೆ ಪ್ರಕರಣದ ತೀರ್ಪು ಮುಂದೂಡಿಕೆ