ಬೆಂಗಳೂರು: ನಗರದ ಮೂಡಲಪಾಳ್ಯದಲ್ಲಿ ಮದ್ಯಪಾನ ಮಾಡಿ ಕಾರ್ ರೇಸ್ ಮಾಡುತ್ತಿದ್ದ ಯುವಕರಿಂದಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಯುವಕ ಅಕ್ಷಯ್ ಇಂದು ಸಾವನ್ನಪ್ಪಿದ್ದಾನೆ. ಡಿಸೆಂಬರ್ 3ರಂದು ನಡೆದ ಭೀಕರ ಅಪಘಾತದಿಂದಾಗಿ ಗಂಭೀರ ಗಾಯಾಳುವಾಗಿದ್ದ ಅಕ್ಷಯ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗ ಹಿನ್ನೆಲೆಯಲ್ಲಿ ಆತ ಇಂದು ಕೊನೆಯುಸಿರೆಳೆದಿದ್ದಾನೆ.
ಇದನ್ನೂ ಓದಿ: ಮಕ್ಕಳ ಮೆರವಣಿಗೆ ಮೇಲೆಯೇ ಚಲಿಸಿದ ಲಾರಿ! ನಾಲ್ವರು ಮಕ್ಕಳು ಬಲಿ, 12 ಜನರಿಗೆ ಗಾಯ
ಹೋಂಡಾ ಸಿವಿಕ್ ಮತ್ತು ಸ್ವಿಫ್ಟ್ ಕಾರಿನಲ್ಲಿ ಕುಡಿದ ಮತ್ತಿನಲ್ಲಿದ್ದ ಯುವಕರು ಕಾರು ರೇಸ್ ಮಾಡುತ್ತಿದ್ದರು. ಹಠಕ್ಕೆ ಬಿದ್ದವರಂತೆ ನಾ ಮುಂದೆ ತಾ ಮುಂದೆ ಎಂಬಂತೆ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದು ಎದುರಿನ ರಾಯಲ್ ಎನ್ಫೀಲ್ಡ್ ಬೈಕ್ಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್ ಎರಡು ಪೀಸ್ ಆಗಿ, ಬೈಕ್ ಸವಾರ ಅಕ್ಷಯ್ (28) ಮೇಲಕ್ಕೆ ಹಾರಿಬಿದ್ದಿದ್ದ. ಡಿಕ್ಕಿ ಹೊಡೆದ ಪರಿಣಾಮ ಅಕ್ಷಯ್ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು.
ಇದನ್ನೂ ಓದಿ: ಹೆಂಡತಿ, ಮಕ್ಕಳನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡ ಪತಿ! ಕಿಟಕಿಯಿಂದ ನೋಡಿದ ಗ್ರಾಮಸ್ಥರಿಗೆ ಕಾದಿತ್ತು ಶಾಕ್!
ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನಗರದ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ. #BikeAccident #CarAccident #Bengaluru #RoadAccident pic.twitter.com/AObiYSl3KW
— Vijayavani (@VVani4U) December 4, 2020
VIDEO| ಯುವಕರ ಹುಚ್ಚಾಟಕ್ಕೆ ಸಾವು ಬದುಕಿನ ನಡುವೆ ಬೈಕ್ ಸವಾರನ ಹೋರಾಟ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!
ಮದುವೆ ಮಂಟಪದಿಂದ ಎದ್ದು ಹೋದ ವಧು! ವಾಪಾಸು ಬರುವಷ್ಟರಲ್ಲಿ ಪೂರ್ತಿ ಕುಟುಂಬವೇ ಹೆಮ್ಮೆ ಪಡುತ್ತಿತ್ತು!