More

    VIDEO| ಯುವಕರ ಹುಚ್ಚಾಟಕ್ಕೆ ಸಾವು ಬದುಕಿನ ನಡುವೆ ಬೈಕ್​ ಸವಾರನ ಹೋರಾಟ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!

    ಬೆಂಗಳೂರು: ನಗರದ ಮೂಡಲಪಾಳ್ಯದಲ್ಲಿ ನಡೆದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಮದ್ಯಪಾನ ಮತ್ತಿನಲ್ಲಿ ಯುವಕರು ಕಾರಿನಲ್ಲಿ ಡ್ರ್ಯಾಗ್ ರೇಸ್ ಮಾಡಿದ್ದೇ ಭಯಾನಕ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

    ಬಂಧಿತನನ್ನು ತುಷಾರ್​ ಎಂದು ಗುರುತಿಸಲಾಗಿದೆ. ಕಳೆದ ಭಾನುವಾರ ರಾತ್ರಿ ಅಪಘಾತ ನಡೆದಿತ್ತು. ಅದರ ಭೀಕರ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.

    VIDEO| ಯುವಕರ ಹುಚ್ಚಾಟಕ್ಕೆ ಸಾವು ಬದುಕಿನ ನಡುವೆ ಬೈಕ್​ ಸವಾರನ ಹೋರಾಟ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!

    ಹಠಕ್ಕೆ ಬಿದ್ದವರಂತೆ ನಾ ಮುಂದೆ ತಾ ಮುಂದೆ ಎಂಬಂತೆ ಅತೀ ವೇಗವಾಗಿ ಕಾರು ಚಲಾಯಿಸಿಕೊಂಡು‌ ಬಂದು ಎದುರಿನ ರಾಯಲ್ ಎನ್ಫೀಲ್ಡ್ ಬೈಕ್​ಗೆ ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ರಭಸಕ್ಕೆ ಬೈಕ್​ ಎರಡು ಪೀಸ್ ಆಗಿ, ಬೈಕ್ ಸವಾರ ಅಕ್ಷಯ್ (28)​ ಮೇಲಕ್ಕೆ ಹಾರಿಬಿದ್ದಿದ್ದ.

    VIDEO| ಯುವಕರ ಹುಚ್ಚಾಟಕ್ಕೆ ಸಾವು ಬದುಕಿನ ನಡುವೆ ಬೈಕ್​ ಸವಾರನ ಹೋರಾಟ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!

    ಅಕ್ಷಯ್ ತೀವ್ರ ಗಾಯಗೊಂಡಿದ್ದು, ಸೊಂಟದಿಂದ ಮೇಲೆ ಸ್ವಾಧೀನ ಕಳೆದುಕೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts