ಬೈಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿ; ಟೆಕ್ಕಿ ಮೃತ್ಯು

ಬೆಂಗಳೂರು: ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್‌ವೇರ್ ಇಂಜಿನಿಯರ್ ಮೃತಪಟ್ಟಿರುವ ಪ್ರಕರಣ ಬೆಳ್ಳಂದೂರಿನಲ್ಲಿ ನಡೆದಿದೆ. ಕಸವನಹಳ್ಳಿ ನಿವಾಸಿ ಅಮಿತ್ ಭಾರ್ಗವ್(46) ಮೃತ ದುರ್ದೈವಿ. ಕಸವನಹಳ್ಳಿ ಮುಖ್ಯರಸ್ತೆಯ ಅಮೃತ್ ಕಾಲೇಜು ಬಳಿ ಗುರುವಾರ ತಡರಾತ್ರಿ 12:30ರ ಸುಮಾರಿಗೆ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಚಾಲಕನ ಬಂಧನಕ್ಕೆ ಶೋಧ ನಡೆಸಲಾಗಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: … Continue reading ಬೈಕ್​ಗೆ ಹಿಂಬದಿಯಿಂದ ಕಾರು ಡಿಕ್ಕಿ; ಟೆಕ್ಕಿ ಮೃತ್ಯು