More

    ಶಾಲೆಗೆ ಹೋಗುವಾಗ ಬಿಎಂಟಿಸಿ ಬಸ್​ಗೆ ಮಗಳು ಬಲಿ, ಅಮ್ಮ-ಮಗನ ಸ್ಥಿತಿ ಗಂಭೀರ

    ಬೆಂಗಳೂರು: ಬಿಎಂಟಿಸಿ ಬಸ್​ ಹರಿದು 15 ವರ್ಷದ ಬಾಲಕಿ ಮೃತಪಟ್ಟ ಘಟನೆ ಇಂದು(ಮಂಗಳವಾರ) ಬೆಳಗ್ಗೆ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

    ಲಾವ್ಯಾಶ್ರೀ(15) ಮೃತ ದುರ್ದೈವಿ. ಪ್ರಿಯದರ್ಶಿನಿ ಎಂಬುವವರು ಮಗಳು ಲಾವ್ಯಾಶ್ರೀ ಮತ್ತು ಮಗ ಯಾಶ್ವಿನ್​ರನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದರು. ಟಿಸಿ ಪಾಳ್ಯಯಿಂದ ಭಟ್ಟರಹಳ್ಳಿ ಹೋಗುವ ಮಾರ್ಗದಲ್ಲಿ ಭಟ್ಟರಹಳ್ಳಿ ಸಿಗ್ನಲ್ ಬಳಿ ದ್ವಿಚಕ್ರ ವಾಹನ ಸ್ಕಿಡ್​ ಆಗಿದ್ದು, ಎಡಗಡೆಗೆ ತಾಯಿ-ಮಗ ಬಿದ್ದಿದ್ದಾರೆ. ಬಲಗಡೆಗೆ ಬಿದ್ದ ಬಾಲಕಿ ಮೇಲೆ ಹಿಂದೆ ಬಂದ ಬಸ್ ಹರಿದಿದೆ. ಕೂಡಲೆ ಆಸ್ಪತ್ರೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವು.

    ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯದರ್ಶಿನಿ ಅವರೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಣಬೆ ಪದಾರ್ಥ ತಿಂದು ತಂದೆ-ಮಗ ಸಾವು!? ರಾತ್ರಿಯಿಡೀ ನರಳಾಡಿ ಮನೆಯ ಅಂಗಳದಲ್ಲೇ ದುರಂತ ಅಂತ್ಯ

    ರಾತ್ರೋರಾತ್ರಿ ಮಸಣದಲ್ಲಿ ಸುಂದರ ಯುವತಿಯ ಫೋಟೊ ಇಟ್ಟು ವಾಮಾಚಾರ! ಕಾರಣ ನಿಗೂಢ…

    ಶಂಕಿತ ಉಗ್ರನ ಟಾರ್ಗೆಟ್​ನಿಂದ ಸಿಎಂ ಜಸ್ಟ್​ ಮಿಸ್​! ಶಾರೀಕ್​ನ ಮೊಬೈಲ್ ಡಿಪಿಯಲ್ಲಿ ಇಶಾ ಫೌಂಡೇಶನ್ ಫೋಟೋ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts