ಬೆಂಗಳೂರು: ಬಿಎಂಟಿಸಿ ಬಸ್ ಹರಿದು 15 ವರ್ಷದ ಬಾಲಕಿ ಮೃತಪಟ್ಟ ಘಟನೆ ಇಂದು(ಮಂಗಳವಾರ) ಬೆಳಗ್ಗೆ ಕೆ.ಆರ್.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಲಾವ್ಯಾಶ್ರೀ(15) ಮೃತ ದುರ್ದೈವಿ. ಪ್ರಿಯದರ್ಶಿನಿ ಎಂಬುವವರು ಮಗಳು ಲಾವ್ಯಾಶ್ರೀ ಮತ್ತು ಮಗ ಯಾಶ್ವಿನ್ರನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದರು. ಟಿಸಿ ಪಾಳ್ಯಯಿಂದ ಭಟ್ಟರಹಳ್ಳಿ ಹೋಗುವ ಮಾರ್ಗದಲ್ಲಿ ಭಟ್ಟರಹಳ್ಳಿ ಸಿಗ್ನಲ್ ಬಳಿ ದ್ವಿಚಕ್ರ ವಾಹನ ಸ್ಕಿಡ್ ಆಗಿದ್ದು, ಎಡಗಡೆಗೆ ತಾಯಿ-ಮಗ ಬಿದ್ದಿದ್ದಾರೆ. ಬಲಗಡೆಗೆ ಬಿದ್ದ ಬಾಲಕಿ ಮೇಲೆ ಹಿಂದೆ ಬಂದ ಬಸ್ ಹರಿದಿದೆ. ಕೂಡಲೆ ಆಸ್ಪತ್ರೆ ಸೇರಿಸಿದ್ರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವು.
ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಬದುಕಲಿಲ್ಲ. ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಿಯದರ್ಶಿನಿ ಅವರೂ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರೋರಾತ್ರಿ ಮಸಣದಲ್ಲಿ ಸುಂದರ ಯುವತಿಯ ಫೋಟೊ ಇಟ್ಟು ವಾಮಾಚಾರ! ಕಾರಣ ನಿಗೂಢ…
ಶಂಕಿತ ಉಗ್ರನ ಟಾರ್ಗೆಟ್ನಿಂದ ಸಿಎಂ ಜಸ್ಟ್ ಮಿಸ್! ಶಾರೀಕ್ನ ಮೊಬೈಲ್ ಡಿಪಿಯಲ್ಲಿ ಇಶಾ ಫೌಂಡೇಶನ್ ಫೋಟೋ!