More

    ಎತ್ತಿನ ಬಂಡಿಗೆ ದ್ವಿಚಕ್ರ ವಾಹನ ಡಿಕ್ಕಿ, ಬೈಕ್​ ಸವಾರ ಸಾವು..

    ವಿಜಯನಗರ: ಎತ್ತಿನ ಬಂಡಿಯೊಂದಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊರವಲಯದ ಚೋರನೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.

    ಅಮರದೇವರ ಗುಡ್ಡ ತಾಂಡಾದ ನಿವಾಸಿ ವಿನಯ್ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿನಯ್ ಅಮರದೇವರ ಗುಡ್ಡ ತಾಂಡಾದಿಂದ ಕೂಡ್ಲಿಗಿ ಕಡೆ ಹೊರಟಿದ್ದ ವೇಳೆ ಚೋರನೂರು ರಸ್ತೆಯ ಪಿರಾಮಿಡ್ ಬಳಿ ಈ ಅಪಘಾತ ಸಂಭವಿಸಿದೆ.

    ವಿನಯ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಬಂಜಾರ ಸಂಘಟನೆಗಳ ಮುಖಂಡನಾಗಿ ಸಕ್ರಿಯವಾಗಿದ್ದ.

    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ರಿಷಬ್​ ಶೆಟ್ಟಿ ಬೇಸರ!

    ಒಂದು ಸ್ಫೋಟ, ಒಂಬತ್ತು ಸಾವು: ಶುಭ ಸಮಾರಂಭದ ಮನೆಯಲ್ಲಿ ಸೂತಕದ ಕಾವು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts