ಎತ್ತಿನ ಬಂಡಿಗೆ ದ್ವಿಚಕ್ರ ವಾಹನ ಡಿಕ್ಕಿ, ಬೈಕ್​ ಸವಾರ ಸಾವು..

ವಿಜಯನಗರ: ಎತ್ತಿನ ಬಂಡಿಯೊಂದಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊರವಲಯದ ಚೋರನೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಅಮರದೇವರ ಗುಡ್ಡ ತಾಂಡಾದ ನಿವಾಸಿ ವಿನಯ್ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿನಯ್ ಅಮರದೇವರ ಗುಡ್ಡ ತಾಂಡಾದಿಂದ ಕೂಡ್ಲಿಗಿ ಕಡೆ ಹೊರಟಿದ್ದ ವೇಳೆ ಚೋರನೂರು ರಸ್ತೆಯ ಪಿರಾಮಿಡ್ ಬಳಿ ಈ ಅಪಘಾತ ಸಂಭವಿಸಿದೆ. ವಿನಯ್ ಅಖಿಲ ಭಾರತೀಯ … Continue reading ಎತ್ತಿನ ಬಂಡಿಗೆ ದ್ವಿಚಕ್ರ ವಾಹನ ಡಿಕ್ಕಿ, ಬೈಕ್​ ಸವಾರ ಸಾವು..