More

    ಬೈಕ್​ನಲ್ಲಿ ಹೋಗುತ್ತಿದ್ದಾಗಲೇ ಸಾವು!; ದ್ವಿಚಕ್ರವಾಹನ ಚಲಾಯಿಸುತ್ತಿರುವಾಗ ಬಡಿದ ಸಿಡಿಲು..

    ಹುಬ್ಬಳ್ಳಿ: ಸಾಮಾನ್ಯವಾಗಿ ಮಳೆ-ಗುಡುಗು-ಸಿಡಿಲು ಬರುವಾಗ ಮರಗಳ ಕೆಳಗೆ ಆಶ್ರಯ ಪಡೆದು ಸಾವಿಗೀಡಾಗುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಬೈಕ್​ನಲ್ಲಿ ಸಾಗುತ್ತಿರುವಾಗಲೇ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.

    ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಮತ್ತು ಪಶುಪತಿಹಾಳ ಮಾರ್ಗಮಧ್ಯೆ ಈ ಅವಘಡ ಸಂಭವಿಸಿದೆ. ಪರಿಣಾಮವಾಗಿ ಬೈಕ್​ ಸವಾರ, ಪಶುಪತಿಹಾಳದ ನಿವಾಸಿ ಪ್ರವೀಣ್ ಬಡಿಗೇರ (32) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

    ಹುಬ್ಬಳ್ಳಿಯ ಖಾಸಗಿ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್, ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಇವರು ಬೈಕ್​ನಲ್ಲಿ ಹೋಗುತ್ತಿರುವಾಗಲೇ ಸಿಡಿಲು ಅಪ್ಪಳಿಸಿ ಸಾವು ಸಂಭವಿಸಿದೆ.

    ‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts