ಹುಬ್ಬಳ್ಳಿ: ಸಾಮಾನ್ಯವಾಗಿ ಮಳೆ-ಗುಡುಗು-ಸಿಡಿಲು ಬರುವಾಗ ಮರಗಳ ಕೆಳಗೆ ಆಶ್ರಯ ಪಡೆದು ಸಾವಿಗೀಡಾಗುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಬೈಕ್ನಲ್ಲಿ ಸಾಗುತ್ತಿರುವಾಗಲೇ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಮತ್ತು ಪಶುಪತಿಹಾಳ ಮಾರ್ಗಮಧ್ಯೆ ಈ ಅವಘಡ ಸಂಭವಿಸಿದೆ. ಪರಿಣಾಮವಾಗಿ ಬೈಕ್ ಸವಾರ, ಪಶುಪತಿಹಾಳದ ನಿವಾಸಿ ಪ್ರವೀಣ್ ಬಡಿಗೇರ (32) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಹುಬ್ಬಳ್ಳಿಯ ಖಾಸಗಿ ಟ್ರಾನ್ಸ್ಪೋರ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್, ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಇವರು ಬೈಕ್ನಲ್ಲಿ ಹೋಗುತ್ತಿರುವಾಗಲೇ ಸಿಡಿಲು ಅಪ್ಪಳಿಸಿ ಸಾವು ಸಂಭವಿಸಿದೆ.
‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!