More

    ಪ್ರಾರ್ಥನೆಗೆಂದು ಚರ್ಚ್​ಗೆ ಹೋಗುತ್ತಿದ್ದ ಸವಾರ ಸಾವು…

    ಬೆಂಗಳೂರು: ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಚರ್ಚ್‌ಗೆ ಹೋಗುತ್ತಿದ್ದ ಖಾಸಗಿ ಕಂಪನಿ ನೌಕರ, ಬೈಕ್‌ನಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾನೆ. ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡಿದ್ದಾನೆ.

    ರಾಜಾಜಿನಗರ ಸಮೀಪದ ಪ್ರಕಾಶನಗರ ನಿವಾಸಿ ಅಲೆಕ್ಸ್ (25) ಮೃತ ಸವಾರ. ಗಾಯಗೊಂಡ ಹಿಂಬದಿ ಸವಾರ ಸತೀಶ್ (26) ಎಂಬಾತ ಆಸ್ಪತ್ರೆಯಲ್ಲಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಖಾಸಗಿ ಕಂಪನಿಯಲ್ಲಿ ಮಿಷನ್ ಆಪರೇಟರ್ ಆಗಿದ್ದ ಅಲೆಕ್ಸ್, ಭಾನುವಾರ ಬೆಳಗಿನ ಜಾವ ಸುಮಾರು 3.30ರ ಹೊತ್ತಿಗೆ ಬೈಕ್‌ನಲ್ಲಿ ತನ್ನ ಸ್ನೇಹಿತನ ಜತೆ ಬ್ರಿಗೇಡ್ ರಸ್ತೆಯಲ್ಲಿ ಇರುವ ಚರ್ಚ್‌ಗೆ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದ. ವಿಧಾನಸೌಧ ಸಮೀಪದ ಗೋಪಾಲಗೌಡ ಜಂಕ್ಷನ್‌ನಲ್ಲಿ ಅತೀ ವೇಗವಾಗಿ ಬಂದು ಪಾದಚಾರಿ ಮಾರ್ಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರ ಗಾಯಗೊಂಡಿದ್ದಾರೆ.

    ದಾರಿ ಹೋಕರು ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಮಾರ್ಗಮಧ್ಯೆ ಅಲೆಕ್ಸ್ ಅಸುನೀಗಿದ್ದಾನೆ. ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts