ಹಾವೇರಿ: ತಿರುವೊಂದರಲ್ಲಿ ಸಂಭವಿಸಿದ ಅಪಘಾತದಿಂದಾಗಿ ಸವಾರನೊಬ್ಬ ಬೈಕ್ ಸಮೇತ ಕೆರೆಗೆ ಬಿದ್ದು ಸಾವಿಗೀಡಾಗಿದ್ದಾನೆ. ಹಾವೇರಿ ಜಿಲ್ಲೆಯಲ್ಲಿ ಇಂಥದ್ದೊಂದು ಅಪಘಾತ ಸಂಭವಿಸಿದೆ.
ಬಾಷಾಸಾಬ್ ಜಿಗಳೂರ (49) ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ಬಾಷಾಸಾಬ್ ಸವಣೂರು ಪಟ್ಟಣದ ಕಡೆಯಿಂದ ಹಾವೇರಿಯತ್ತ ಸಾಗುತ್ತಿದ್ದಾಗ ಸವಣೂರು ತಾಲೂಕಿನ ಕಲ್ಮಡವು ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಕಲ್ಮಡವು ಗ್ರಾಮದ ಬಳಿ ತಿರುವು ಇದ್ದಿದ್ದರಿಂದ ತಕ್ಷಣಕ್ಕೆ ಬೈಕ್ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಆಗದೆ ಅದು ಸೀದಾ ರಸ್ತೆ ಪಕ್ಕದ ಕೆರೆಗೆ ಹೋಗಿ ಬಿದ್ದಿದೆ. ಸ್ಥಳೀಯರು ಶವವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.
ತಿರುವಿನಲ್ಲಿ ಸೂಕ್ತ ಸೂಚನಾ ಫಲಕಗಳು ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸವಣೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐಆರ್ಸಿಟಿಸಿ ಮೂಲಕ ಇನ್ಮುಂದೆ ಎಷ್ಟು ರೈಲ್ವೆ ಟಿಕೆಟ್ಗಳನ್ನು ಕಾದಿರಿಸಬಹುದು?; ಇಲ್ಲಿದೆ ಹೆಚ್ಚಳದ ಕುರಿತ ವಿವರ..
ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿಕೊಂಡ ಬೆಂಕಿ ಆರಿಸುತ್ತಿದ್ದಾಗಲೇ ಸಿಲಿಂಡರ್ ಸ್ಫೋಟ; ಇಬ್ಬರು ಸ್ಥಳದಲ್ಲೇ ಸಾವು..