ಬೆಳಗಾವಿ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದ ಬಳಿ ಶನಿವಾರ ನಡೆದಿದೆ. ತಾಲೂಕಿನ ಬಸಾಪುರ ಗ್ರಾಮದ ಅಮಿತ್ ಭಾಗವಾನ (38) ಹಾಗೂ ಬೈಲಹೊಂಗಲ ತಾಲೂಕಿನ ಮರಡಿನಾಗಾಲಾಪುರದ ಗ್ರಾಮದ ರಾಜು ಕಮ್ಮಾರ ಗಾಯಾಳುಗಳು. ಈ ಕುರಿತು ಹಿರೇಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ಕನ ಮೇಲೆ ಹಲ್ಲೆ: ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಅಕ್ಕನ ಮೇಲೆ ಹಲ್ಲೆ ಮಾಡಿದ ಘಟನೆ ಶನಿವಾರ ಬೆಳಗಾವಿಯ ಸಹ್ಯಾದ್ರಿನಗರದಲ್ಲಿ ನಡೆದಿದೆ. ಶಂಕರ ನಿಜಗುಳ್ಳಿ ಹಲ್ಲೆ ಮಾಡಿದ ವ್ಯಕ್ತಿ. ಮಹಾದೇವಿ ನಿಜಗುಳ್ಳಿ ಹಲ್ಲೆಗೊಳಗಾದ ಅಕ್ಕ. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.