ವಾಯುಸೇನೆಯ ಬಲಾಢ್ಯ ರಫೇಲ್​ ಯುದ್ಧ ವಿಮಾನಗಳಿಗೆ ಎದುರಾಗಿದೆ ಆಪತ್ತು…!

blank

ಅಂಬಾಲಾ(ಹರಿಯಾಣಾ): ಫ್ರಾನ್ಸ್​ ನಿರ್ಮಿತ ಯುದ್ಧ ವಿಮಾನ ರಫೇಲ್​ ಸೇರ್ಪಡೆಯಾಗಿರುವುದು ಭಾರತೀಯ ವಾಯುಪಡೆಗೆ ಭಾರಿ ಬಲವನ್ನೇ ತಂದಿದೆ. ಜತೆಗೆ, ನೆರೆ ರಾಷ್ಟ್ರಗಳಲ್ಲಿ ಭೀತಿಯನ್ನು ಮೂಡಿಸಿದೆ. ಅಂಥ ವಿಮಾನಗಳಿಗೆ ಈಗ ಆಪತ್ತು ಎದುರಾಗಿದೆ.

ಹೌದು…! ವಿಮಾನಗಳಿಗೆ ಎದುರಾಗಿರುವ ಆಪತ್ತಿನ ಬಗ್ಗೆ ಸ್ವತಃ ಭಾರತೀಯ ವಾಯಪಡೆ ಕೂಡ ಕಳವಳ ವ್ಯಕ್ತಪಡಿಸಿದೆ. ವಿಮಾನಗಳಿಗೆ ಎದುರಾಗಿರುವ ಕಂಟಕದ ಬಗ್ಗೆ ವಾಯುಪಡೆಯ ಪರಿವೀಕ್ಷಣೆ ಹಾಗೂ ಸುರಕ್ಷತಾ ವಿಭಾಗದ ಮಹಾ ನಿರ್ದೇಶಕ ಏರ್​ ಮಾರ್ಷಲ್​ ಮಾನವೇಂದ್ರ ಸಿಂಗ್​ ಅವರು ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಸ್ನಿ ಆನಂದ್​ ಅರೋರಾಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ; ವಿಡಿಯೋ: ಬಗ್ಗಿ ಹೋದರೂ ಬೆತ್ತಲು ಬಚ್ಚಿಡಲಾಗಲಿಲ್ಲ….! ಲೈವ್​ನಲ್ಲಿ ಆ್ಯಂಕರ್​ ಪತ್ನಿ ಎಡವಟ್ಟು…! 

ಸದ್ಯ ಹರಿಯಾಣದ ಅಂಬಾಲಾ ವಾಯುನೆಲೆಯಲ್ಲಿ ರಫೇಲ್​ ಯುದ್ಧ ವಿಮಾನಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಆದರೆ, ಈ ವಾಯುನೆಲೆಯಲ್ಲಿ ಹಕ್ಕಿಗಳ ದಟ್ಟಣೆ ಹೆಚ್ಚಾಗಿದೆ. ಹಕ್ಕಿಗಳು ಡಿಕ್ಕಿ ಹೊಡೆದಲ್ಲಿ ವಿಮಾನಗಳಿಗೆ ಭಾರಿ ಹಾನಿ ಉಂಟಾಗಲಿದೆ. ಸುತ್ತಲಿನ ಪ್ರದೇಶದಲ್ಲಿ ಕಸದ ರಾಶಿ ಹೆಚ್ಚಾಗಿರುವುದು ಇಲ್ಲಿ ಹಕ್ಕಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡಬರಲು ಕಾರಣವಾಗಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

ಹಕ್ಕಿಗಳ ಸಂಖ್ಯೆ ನಿಯಂತ್ರಿಸುವುದು ಹಾಗೂ ಕಸದ ರಾಶಿಯನ್ನು ತೆರವುಗೊಳಿಸಲು ಹಲವು ಕ್ರಮಗಳನ್ನು ಶಿಫಾರಸು ಮಾಡಲಾಗಿದೆ. ಜತೆಗೆ, ಅಂಬಾಲಾದ ಜಂಟಿ ಆಯುಕ್ತ ಹಾಗೂ ಪಾಲಿಕೆಯ ಆಯುಕ್ತರನ್ನು ವಾಯುನೆಲೆ ಅಧಿಕಾರಿಗಳು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಇದನ್ನೂ ಓದಿ; ಸೆಲ್​ಗಳಲ್ಲಿ ಸೆರೆವಾಸ, ನಗ್ನರಾಗಿಸಿ ಸೋಂಕು ನಿವಾರಕ ಸಿಂಪಡಣೆ; ಚೀನಾ ಉಯ್ಘರ್​ ಮುಸ್ಲಿಮರ ಸ್ಥಿತಿಯಿದು….! 

ಯುದ್ಧ ವಿಮಾನಗಳನ್ನು ಸುರಕ್ಷಿತವಾಗಿಡಲು ಸಣ್ಣ ಹಾಗೂ ದೊಡ್ಡ ಪಕ್ಷಿಗಳನ್ನು ವಾಯುನೆಲೆ ಪ್ರದೇಶದಿಂದ ದೂರವಿಡುವುದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಸುತ್ತಲಿನ ಪ್ರದೇಶದಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತ್ಯಾಜ್ಯನೀರು ಸಂಸ್ಕರಣಾ ಘಟಕ ಸ್ಥಾಪಿಸಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.
ವಾಯಪಡೆ ಬಯಸಿದ ನೆರವನ್ನೆಲ್ಲ ರಾಜ್ಯ ಸರ್ಕಾರದಿಂದ ನೀಡಲಾಗುವುದು ಎಂದು ಸ್ಥಳೀಯಾಡಳಿತ ಸಚಿವ ಅನಿಲ್​ ವಿಜ್​ ಹೇಳಿದ್ದಾರೆ.

ಆಕಾಶದಿಂದ ‘ಹಣದ ಮಳೆ’ಯೇ ಸುರಿಯಿತು; ರಾತ್ರೋರಾತ್ರಿ ಲಕ್ಷಾಧೀಶರಾದ ಗ್ರಾಮಸ್ಥರು…!

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…