ಜನನ, ಮರಣ ಪ್ರಮಾಣ ಪತ್ರದ ಶುಲ್ಕ 10 ಪಟ್ಟು ಏರಿಕೆ: ಬಿಜೆಪಿ ಖಂಡನೆ

blank

ಗದಗ: ರಾಜ್ಯದಲ್ಲಿರುವ ಕಾಂಗ್ರೆಸ್​ ಸರ್ಕಾರ ಜನನ, ಮರಣ ಪ್ರಮಾಣ ಪತ್ರದ ಶುಲ್ಕವನ್ನು 10 ಪಟ್ಟು ಹೆಚ್ಚಿಗೆ ಮಾಡಿದೆ. ಇದರಿಂದ ಸಾಮಾನ್ಯ ಜೇಬಿಗೆ ಹೊರೆ ಬೀಳುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಖಾಲಿ ಆಗಿರುವ ಬೊಕ್ಕಸವನ್ನು ತುಂಬಲು ಸಾಮಾನ್ಯರ ಜೇಬಿಗೆ ಕಾಂಗ್ರೆಸ್​ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ. ಎಂ. ಹಿರೇಮಠ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡುರುವ ಅವರು, ಬಸ್​, ಪೆಟ್ರೋಲ್​, ವಿದ್ಯುತ್​, ಹಾಲು, ಸಾರಾಯಿ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದ ಸರ್ಕಾರ ಇದೀಗ ಜನನ, ಮರಣದಲ್ಲೂ ಹಣ ಗಳಿಸಲು ಮುಂದಾಗಿದೆ. ಆಸ್ತಿ ಹಂಚಿಕೆ, ಸೊತ್ತುಗಳ ವಿಲೆವಾರಿ, ಬ್ಯಾಂಕ್​ ವಹಿವಾಟು, ನ್ಯಾಯಾಲಯದಲ್ಲಿ ನಡೆಯುವ ಪ್ರಕರಣಗಳಿಗೆ ಜನನ, ಮರಣಪತ್ರಗಳು ಅಗತ್ಯ ದಾಖಲೆಗಳಾಗಿವೆ. ಒಂದು ಮಗು ಹುಟ್ಟಿದ ಮಗುವನ್ನು ಶಾಲೆಗೆ ಸೇರಿಸಲು, ಆಧಾರ ಕಾರ್ಡ್​ ಮಾಡಿಸಲು ಹಾಗು ಇನ್ನಿತರ ಸಂದರ್ಭದಲ್ಲಿ ಜನನ ಪ್ರಮಾಣ ಪತ್ರ ಬೇಕು. ಹೀಗಿರುವಾಗ ಈ ದಾಖಲೆಗಳ ಶೂಲ್ಕವನ್ನು ಸರ್ಕಾರ ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

TAGGED:
Share This Article

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips

ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…

ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips

ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…

ವೇಜ್​, ನಾನ್​ವೆಜ್ ಖಾದ್ಯ​ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!

Tomato :  ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು  ಕರಿ, ಗ್ರೇವಿ, ಸೂಪ್…