ಗದಗ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜನನ, ಮರಣ ಪ್ರಮಾಣ ಪತ್ರದ ಶುಲ್ಕವನ್ನು 10 ಪಟ್ಟು ಹೆಚ್ಚಿಗೆ ಮಾಡಿದೆ. ಇದರಿಂದ ಸಾಮಾನ್ಯ ಜೇಬಿಗೆ ಹೊರೆ ಬೀಳುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಖಾಲಿ ಆಗಿರುವ ಬೊಕ್ಕಸವನ್ನು ತುಂಬಲು ಸಾಮಾನ್ಯರ ಜೇಬಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ. ಎಂ. ಹಿರೇಮಠ ಆರೋಪಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡುರುವ ಅವರು, ಬಸ್, ಪೆಟ್ರೋಲ್, ವಿದ್ಯುತ್, ಹಾಲು, ಸಾರಾಯಿ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದ ಸರ್ಕಾರ ಇದೀಗ ಜನನ, ಮರಣದಲ್ಲೂ ಹಣ ಗಳಿಸಲು ಮುಂದಾಗಿದೆ. ಆಸ್ತಿ ಹಂಚಿಕೆ, ಸೊತ್ತುಗಳ ವಿಲೆವಾರಿ, ಬ್ಯಾಂಕ್ ವಹಿವಾಟು, ನ್ಯಾಯಾಲಯದಲ್ಲಿ ನಡೆಯುವ ಪ್ರಕರಣಗಳಿಗೆ ಜನನ, ಮರಣಪತ್ರಗಳು ಅಗತ್ಯ ದಾಖಲೆಗಳಾಗಿವೆ. ಒಂದು ಮಗು ಹುಟ್ಟಿದ ಮಗುವನ್ನು ಶಾಲೆಗೆ ಸೇರಿಸಲು, ಆಧಾರ ಕಾರ್ಡ್ ಮಾಡಿಸಲು ಹಾಗು ಇನ್ನಿತರ ಸಂದರ್ಭದಲ್ಲಿ ಜನನ ಪ್ರಮಾಣ ಪತ್ರ ಬೇಕು. ಹೀಗಿರುವಾಗ ಈ ದಾಖಲೆಗಳ ಶೂಲ್ಕವನ್ನು ಸರ್ಕಾರ ಕಡಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನನ, ಮರಣ ಪ್ರಮಾಣ ಪತ್ರದ ಶುಲ್ಕ 10 ಪಟ್ಟು ಏರಿಕೆ: ಬಿಜೆಪಿ ಖಂಡನೆ

ಬೆಣ್ಣೆಯಂತೆ ಕೊಬ್ಬು ಕರಗಬೇಕೆ; ಉತ್ತಮ ಫಲಿತಾಂಶಕ್ಕಾಗಿ ಮನೆಯಲ್ಲಿರುವ ಈ ವಸ್ತುಗಳನ್ನು ಬಳಸಿ | Health Tips
ಕೆಲವರು ಹೊರಗೆ ಊಟ ಮಾಡಿದ ನಂತರವೂ ತೆಳ್ಳಗಿರುತ್ತಾರೆ. ಯಾವುದೇ ಜಿಮ್ ಅಥವಾ ವ್ಯಾಯಾಮವನ್ನೂ ಮಾಡುವುದಿಲ್ಲ. ಏಕೆಂದರೆ…
ಶೀತ & ಜ್ವರವಿದ್ದಾಗ ಹುಳಿ ಮೊಸರು ಸೇವಿಸಬಹುದೇ?; ಇಲ್ಲಿದೆ ಉಪಯುಕ್ತ ಮಾಹಿತಿ | Health Tips
ಶೀತ ಮತ್ತು ಜ್ವರದ ಚಿಕಿತ್ಸೆಯ ಜತೆಗೆ ಹಲವು ರೀತಿಯ ಮುನ್ನೆಚ್ಚರಿಕೆಗಳನ್ನು ಸಹ ತೆಗೆದುಕೊಳ್ಳಬೇಕಾಗುತ್ತದೆ. ಮೊಸರು ಸೇವಿಸದಿರುವುದು…
ವೇಜ್, ನಾನ್ವೆಜ್ ಖಾದ್ಯ ‘ಟೊಮ್ಯಾಟೋ’ ಇಲ್ಲದೆ ಆಗೋದೆ ಇಲ್ವಾ? ಹೆಚ್ಚು Tomato ತಿನ್ನುವ ನಿಮಗಾಗಿ ಈ ಸುದ್ದಿ!
Tomato : ನಾವು ನಮ್ಮ ದೈನಂದಿನ ಅಡುಗೆಗಳಲ್ಲಿ ಟೊಮ್ಯಾಟೋವನ್ನು ಬಳಸುತ್ತೇವೆ. ಟೊಮ್ಯಾಟೋಗಳನ್ನು ಕರಿ, ಗ್ರೇವಿ, ಸೂಪ್…