More

    ಶಾಸಕ ಗೋಪಾಲಕೃಷ್ಣ ಬೇಳೂರು ಜನ್ಮದಿನ; ಗೋ ಶಾಲೆಗಳಿಗೆ ಮೇವು

    ಸಾಗರ: ರಾಜ್ಯದಲ್ಲಿ ಬರ ಇರುವ ಕಾರಣ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನವನ್ನು ಸರಳವಾಗಿ ಆಚರಿಸಲು ಸೂಚಿಸಿದ್ದಾರೆ. ಹಾಗಾಗಿ ಗೋಶಾಲೆಗಳಿಗೆ ಮೇವು ವಿತರಿಸುವ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಚೇತನರಾಜ್ ಕಣ್ಣೂರು ಹೇಳಿದರು.

    ಶಾಸಕರ ಜನ್ಮದಿನದ ನಿಮಿತ್ತ ನಗರದ ಇತಿಹಾಸ ಪ್ರಸಿದ್ಧವಾದ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ, ವರದಹಳ್ಳಿ ಮತ್ತು ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷೇತ್ರದ ಶಾಸಕರು ಅತ್ಯಂತ ಸರಳ ಮತ್ತು ಸಹೃದಯಿ, ಜನಾನುರಾಗಿ ಆಗಿದ್ದಾರೆ. ಸಾಗರ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ರೂ. ವೆಚ್ಚದ ಯೋಜನೆಗೆ ಅನುದಾನ ತರುವಲ್ಲಿ ಯಶಸ್ವಿಯಾಗಿದ್ದಾರೆ. ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೆಲಸ ಆರಂಭಗೊಂಡಿದೆ. ಎರಡೂ ತಾಲೂಕುಗಳಿಗೆ ತುರ್ತು ಬರಕ್ಕೆ ಸಂಬಂಧಿಸಿದಂತೆ ತಲಾ 25 ಲಕ್ಷ ರೂ. ಅನುದಾನ ಕೂಡ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಸಂಚರಿಸಿ ಜನರ ಅಹವಾಲನ್ನು ಸ್ವೀಕರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿದ್ದಾರೆ ಎಂದರು.
    ಕಾಂಗ್ರೆಸ್ ಮುಖಂಡರಾದ ಸೋಮಶೇಖರ್ ಲಾವಿಗೆರೆ, ತಾರಾಮೂರ್ತಿ, ಶಿವಪ್ಪ, ಬಸವರಾಜ್, ಗಿರೀಶ್ ಕೋವಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts