ಜನಮನ ಸೆಳೆದ ಗುಣಮಟ್ಟಕ್ಕಾಗಿ ನಡಿಗೆ, ಬಿಐಎಸ್​ನಿಂದ 4 ಕಿ.ಮೀ. ವಾಕಥಾನ್

blank

ಹುಬ್ಬಳ್ಳಿ: ಇಲ್ಲಿಯ ಬ್ಯೂರೋ ಆಫ್ ಇಂಡಿಯನ್ ಸ್ಟಾ್ಯಂಡರ್ಡ್ಸ್ (ಬಿಐಎಸ್) ಶಾಖೆ ವತಿಯಿಂದ ಶನಿವಾರ ನಗರದಲ್ಲಿ ಏರ್ಪಡಿಸಿದ್ದ ಕ್ವಾಲಿಟಿ ವಾಕ್​ಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಯಿತು.

ಇಲ್ಲಿಯ ಭೈರಿದೇವರಕೊಪ್ಪ ಬಳಿಯ ಸನಾ ಗ್ರುಪ್ ಆಫ್ ಇನ್​ಸ್ಟಿಟ್ಯೂಟ್ ಸಹಯೋಗದಲ್ಲಿ ಆಯೋಜಿಸಿದ್ದ ವಾಕಥಾನ್​ನಲ್ಲಿ 650ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು. ಸುಮಾರು ನಾಲ್ಕು ಕಿ.ಮೀ. ವರೆಗೆ ಜಾಥಾ ನಡೆಸಿ ಜಾಗೃತಿ ಮೂಡಿಸಿದರು.

ರ್ವ್ಡಲ ಸ್ಟಾ್ಯಂಡರ್ಡ್ಸ್ ಡೇ ಆಚರಣೆ ಅಂಗವಾಗಿ ಉತ್ಪಾದಕರು ಹಾಗೂ ಗ್ರಾಹಕರಲ್ಲಿ ಗುಣಮಟ್ಟದ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಿತ್ಯ ಬಳಕೆ ವಸ್ತುಗಳು ಗುಣಮಟ್ಟದಿಂದ ಕೂಡಿರಬೇಕು, ಗ್ರಾಹಕರು ಸದಾ ಜಾಗೃತರಾಗಿರಬೇಕು ಎಂಬುದು ಸೇರಿದಂತೆ ವಿವಿಧ ಫಲಕಗಳನ್ನು ಹಿಡಿದುಕೊಂಡು ವಿದ್ಯಾರ್ಥಿಗಳು ಘೊಷಣೆ ಮೊಳಗಿಸಿದರು.

ಸನಾ ಕಾಲೇಜಿನಿಂದ ಆರಂಭವಾದ ವಾಕಥಾನ್​ಗೆ ಬಿಐಎಸ್ ಶಾಖೆಯ ಉಪನಿರ್ದೇಶಕ ಎಂ. ಪ್ರದೀಪಕುಮಾರ, ಸನಾ ಗ್ರುಪ್​ನ ಟ್ರಸ್ಟಿ ಅಶ್ರಫ್ ಅಲಿ ಅವರು ಚಾಲನೆ ನೀಡಿದರು. ಉಣಕಲ್ಲ ಉದ್ಯಾನದವರೆಗೆ ಸಾಗಿದ ಜಾಥಾದಲ್ಲಿ ಅಧಿಕಾರಿಗಳು, ಅಧ್ಯಾಪಕರು ಭಾಗವಹಿಸಿದ್ದರು.

Share This Article

ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan

Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…

ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food

Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…

ನೀವು ಚಿಕನ್ ಅಥವಾ ಮಟನ್​ ಲಿವರ್​ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver

Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…