ತುಮಕೂರು: ಬಿಜೆಪಿ ಕಾರ್ಯಕರ್ತನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ತುಮಕೂರಿನ ಪಾವಗಡ ಹೊರವಲಯದ ಬಿ.ಕೆ.ಹಳ್ಳಿ ಕ್ರಾಸ್ನಲ್ಲಿ ಈ ಕೊಲೆ ನಡೆದುಹೋಗಿದೆ.
ಪ್ರಸನ್ನ ಕುಮಾರ್ (46) ಕೊಲೆಗೀಡಾದ ಕಾರ್ಯಕರ್ತ. ಈತ ಪಾವಗಡದಿಂದ ಸ್ವಗ್ರಾಮ ಅಪ್ಪಾಜಿಹಳ್ಳಿಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ದಾಳಿ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಇಂದು ಸಂಜೆ ಐದು ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ ಎನ್ನಲಾಗಿದೆ.
ತಾಲೂಕು ಬಿಜೆಪಿಯಲ್ಲಿ ರೈತ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯನಾಗಿದ್ದ ಪ್ರಸನ್ನಕುಮಾರ್, ವಿಧಾನಪರಿಷತ್ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯನಾಗಿದ್ದ. ಕೊಲೆಗೆ ಕಾರಣವೇನು ಎಂಬುದು ಇನ್ನೂ ಖಚಿತವಾಗಿ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ರಾಹುಲ್ ಕುಮಾರ್ ಶಹಾಪುರ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.