ಆರ್​ಜೆಡಿ ಇರುವವರೆಗೂ ಬಿಹಾರದಲ್ಲಿ ಎನ್​ಡಿಎ ಸರ್ಕಾರ ರಚಿಸುವುದು ಅಸಾಧ್ಯ: Lalu Prasad

Lalu Prasad Yadav

ಪಟ್ನಾ: ದೆಹಲಿ ವಿಧಾನಸಭೆ ಚುನಾವಣಾ ಫಲಿತಾಂಶ ಬಿಹಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಹಾರದಲ್ಲಿ ಆರ್​ಜೆಡಿ ಇರುವವರೆಗೂ ಬಿಜೆಪಿ ಮತ್ತು ಎನ್​ಡಿಐ ಮೈತ್ರಿಕೂಟ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್​ (Lalu Prasad Yadav) ಹೇಳಿದ್ದಾರೆ.

ಪಟ್ನಾದಲ್ಲಿ ಈ ಕುರಿತು ಮಾತನಾಡಿದ ಲಾಲು ಪ್ರಸಾದ್​ (Lalu Prasad), ದೆಹಲಿ ವಿಧಾನಭೆ ಚುನಾವಣೆ ಫಲಿತಾಂಶ ಇಲ್ಲಿ ಪರಿಣಾಮ ಬೀರುವುದಿಲ್ಲ. ಬಿಹಾರದಲ್ಲಿ ಬಿಜೆಪಿ ಸೋಲಲಿದೆ. ಬಿಹಾರದಲ್ಲಿ ನಾವು ಇರುವವರೆಗೂ ಬಿಜೆಪಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಇಲ್ಲಿನ ಜನ ಬಿಜೆಪಿಯನ್ನು ಸೋಲಿಸಿದ್ದಾರೆ, ಎನ್‌ಡಿಎಯನ್ನೂ ಸೋಲಿಸಲಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯಲು ನಾವು ಸಾಕು. 2005ರಿಂದಲೂ ಅಧಿಕಾರದಲ್ಲಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಈ ಬಾರಿ ಸೋಲಲಿದ್ದಾರೆ ಎಂದು ಆರ್​ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ (Lalu Prasad Yadav) ಭವಿಷ್ಯ ನುಡಿದಿದ್ದಾರೆ. 

ಇನ್ನೂ ಲಾಲು ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ವಿಜಯ್​ಕುಮಾರ್ ಸಿನ್ಹಾ, ಲಾಲು ಅವರು ಬಿಹಾರದಲ್ಲಿ ಇದ್ದರೂ ಇರದಿದ್ದರೂ, ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ. ಲಾಲು ಅವರು ಇರಬೇಕು ಎಂದು ಜನ ಬಯಸುತ್ತಿಲ್ಲ. ಅವರ ಆಡಳಿತವು ಜಾತಿವಾದ ಹಾಗೂ ದುರಾಡಳಿತದಿಂದ ಕೂಡಿತ್ತು. ಇದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿತ್ತು ಎಂದು ಕಿಡಿಕಾರಿದ್ದಾರೆ.

ಸ್ನೇಹಿತನನ್ನು ಟ್ರಿಪ್​ಗೆ ಕರೆದುಕೊಂಡು ಹೋಗಲು ಹಣ ನೀಡಿದ ವಿದ್ಯಾರ್ಥಿಗಳು; ಪುಟ್ಟ ಬಾಲಕರ ಹೃದಯಸ್ಪರ್ಶಿ Video Viral

ಅನುಭವವು ನನ್ನ ನಾಯಕತ್ವದ ಪಾತ್ರದಲ್ಲಿ… RCB ಕ್ಯಾಪ್ಟನ್ ಆದ ಬೆನ್ನಲ್ಲೇ ರಜತ್​ ಪಾಟಿದಾರ್​ ಮೊದಲ ಪ್ರತಿಕ್ರಿಯೆ

Share This Article

1 ರೂ. ಖರ್ಚು ಮಾಡದೆ ನಿಮ್ಮ ಕೂದಲು ದಪ್ಪವಾಗಿ, ಸೊಂಪಾಗಿ ಬೆಳೆಯಲು ಏನು ಮಾಡಬೇಕೆಂದು ನಿಮಗೆ ತಿಳಿದಿದೆಯೇ? Hair Tips

Hair Tips: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಒಂದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೂದಲು ಉದುರುವುದನ್ನು…

ಬೇಸಿಗೆಯಲ್ಲಿ ರಾತ್ರಿ ಪ್ರಯಾಣಿಸುತ್ತಿದ್ದೀರಾ? ಈ ವಿಷಯ ನೆನಪಿರಲಿ… traveling at night

traveling at night : ರಾತ್ರಿಯಲ್ಲಿ  ಹೆಚ್ಚಿನ ರಸ್ತೆಗಳು ಖಾಲಿಯಾಗಿರುತ್ತವೆ, ಸಂಚಾರ ಕಡಿಮೆ ಇರುತ್ತದೆ ಮತ್ತು ಪ್ರಯಾಣವನ್ನು…

ಮಾರ್ಚ್​ 29ರಂದು ಷಷ್ಠ ಗ್ರಹ ಕೂಟ… ಅಪ್ಪಿತಪ್ಪಿಯೂ ಆ ದಿನ ಈ ತಪ್ಪುಗಳನ್ನು ಮಾಡಬೇಡಿ! Shasta Graha Koota

Shasta Graha Koota : ಮಾರ್ಚ್ 29ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅದೇ ದಿನ ಷಷ್ಠ ಗ್ರಹ…