More

    ಭ್ರಷ್ಟಾಚಾರ, ಬಡತನ ನಿರ್ಮೂಲನೆಗೆ ಬಿಜೆಪಿ ಬೆಂಬಲಿಸಿ

    ಧಾರವಾಡ: ಭ್ರಷ್ಟಾಚಾರ ಎಂದರೆ ಬಡವರ ಹೊಟ್ಟೆಯ ಮೇಲೆ ಹೊಡೆದಂತೆ ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಅಭಿಪ್ರಾಯ. ಹೀಗಾಗಿ ಭ್ರಷ್ಟಾಚಾರ ನಿರ್ಮೂಲನೆಗಾಗಿ ಪ್ರಧಾನಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಹೇಳಿದರು.
    ತಾಲೂಕಿನ ಕಲಕೇರಿ ಗ್ರಾಮದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
    ಭಾರತದಲ್ಲಿ ಬಡತನವನ್ನು ನಿರ್ಮೂಲನೆ ಮಾಡಲು ಪ್ರಧಾನಿ ಮೋದಿ ೧೦ ವರ್ಷಗಳಿಂದ ಶ್ರಮಿಸಿದ್ದಾರೆ. ಸರ್ವ ಸಮುದಾಯಗಳ ಅಭಿವೃದ್ಧಿ ಮೋದಿ ಅವರಿಂದ ಮಾತ್ರ ಸಾಧ್ಯ. ಹೀಗಾಗಿ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಬೇಕು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು ಎಂದರು.
    ಬಳಿಕ ದೇವರಹುಬ್ಬಳ್ಳಿಯ ಶ್ರೀ ಸಿದ್ಧಾಶ್ರಮ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಯೋಗಿ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
    ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಆರತಿ ಹಿರೇಮಠ, ಕಲ್ಮೇಶ ಬೇಲೂರ, ರುದ್ರಗೌಡ ಪಾಟೀಲ, ಮಾಲತೇಶ ತೌಲಿ, ಬಸವರಾಜ ಮನಗುಂಡಿ, ಮಲ್ಲನಗೌಡ ಪಾಟೀಲ, ಬಸವರಾಜ ಕುಂದಗೋಳಮಠ, ಮಂಜುನಾಥ ಇದ್ಲಿ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts