More

    ಎಂ. ಕೃಷ್ಣಪ್ಪ ಮಂತ್ರಿಯಾಗುತ್ತಾರೆ; ಬಿಜೆಪಿ ಯುವ ಮುಖಂಡ ಸುಪ್ರೀತ್​ ಭವಿಷ್ಯ

    ಬೆಂಗಳೂರು ದಕ್ಷಿಣ: ವಿಧಾನಸಭಾ ಕ್ಷೇತ್ರದ ದೊಡ್ಡತೋಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಕೃಷ್ಣಪ್ಪ ಪರ ಮತಯಾಚನೆ ಮಾಡಲಾಯಿತು.

    ಬಿಜೆಪಿ ಕಾರ್ಯಕರ್ತರ ಪಕ್ಷ

    ಬಿಜೆಪಿ ಯುವ ಮುಖಂಡ ಸುಪ್ರೀತ್​ ಮಾತನಾಡಿ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದ್ದು ಪ್ರಾಬಲ್ಯ ಹೊಂದಿದೆ. ಎಲ್ಲ ಬೂತ್​ಗಳಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ಪರ ಮತಯಾಚಿಸಲಾಗುತ್ತಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಮನೆ ಮನೆಗೂ ತಲುಪಿಸುವ ಕಾಯಕದಲ್ಲಿ ನಿರತರಾಗಿದ್ದೇವೆ ಎಂದರು.

    ಇದನ್ನೂ ಓದಿ: ಮಳೆಯನ್ನೂ ಲೆಕ್ಕಿಸದೆ ಮತಯಾಚಿಸಿದ ಸಪ್ತಗಿರಿಗೌಡ

    ಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ

    ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ನವೀನ್​ ರೆಡ್ಡಿ ಮಾತನಾಡಿ, ಕ್ಷೇತ್ರದ ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಮತಯಾಚನೆ ವೇಳೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಮತ್ತೊಮ್ಮೆ ಕೃಷ್ಣಪ್ಪ ಅವರು ಜಯದ ನಗೆ ಬೀರಿ ಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದರು.

    ಇದನ್ನೂ ಓದಿ: ಅಭಿವೃದ್ಧಿಗಾಗಿ ಮತ ನೀಡಿ: ಮಂಜುಳಾ ಲಿಂಬಾವಳಿ ಮನವಿ

    ಸ್ಥಳಿಯ ಮುಖಂಡರಾದ ರವಿ ರೆಡ್ಡಿ, ಅಂಬರೀಶ್​ ರೆಡ್ಡಿ, ಅರ್ಜುನ್​, ಅಪ್ಪಯ್ಯ, ಮಹೇಶ್​, ರವಿ, ಗುರುಮೂರ್ತಿ ರೆಡ್ಡಿ, ಶ್ರೀನಿವಾಸ್​ ಸ್ಥಳಿಯ ಮುಖಂಡರು ಹಾಗೂ ಕಾರ್ಯಕರ್ತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts