ಉಡುಪಿ: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ಇನ್ನು ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಗೆಲುವಿನ ನಗೆ ಬೀರಿದೆ ಮತ್ತು ಕರಾವಳಿ ಕರ್ನಾಟಕದಲ್ಲಿನ ನೆಲೆಯನ್ನು ವಿಸ್ತರಿಸಿದೆ.
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಯಶ್ಪಾಲ್ ಸುವರ್ಣ ಕಾಂಗ್ರೆಸ್ನ ಪ್ರಸಾದ್ ಕಾಂಚನ್ ಹಾಗೂ ಜೆಡಿಎಸ್ನ ದಕ್ಷತ್ ಆರ್ ಶೆಟ್ಟಿ ವಿರುದ್ಧ 32,776 ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ಮೂಲಕ ಗೆಲುವಿನ ನಗೆ ಬೀರಿದ್ಧಾರೆ.
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಂಧನ ಸಚಿವ ಸುನೀಲ್ ಕುಮಾರ್ ಕಾಂಗ್ರೆಸ್ನ ಉದಯ್ ಶೆಟ್ಟಿ ಮುನಿಯಾಲ್ ವಿರುದ್ಧ 4,602 ಸಾವಿರ ಮತಗಳ ಅಂತರದಲ್ಲಿ ಜಯ ಗಳಿಸಿದ್ದಾರೆ.
ಕಾಪು: ಕಾಪು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುರ್ಮೆ ಸುರೇಶ್ ಶೆಟ್ಟಿ ಕಾಂಗ್ರೆಸ್ನ ವಿನಯ್ ಕುಮಾರ್ ಸೊರಕೆ ವಿರುದ್ಧ 13,004 ಸಾವಿರ ಮತಗಳ ಅಂತರದಲ್ಲಿ ಜಯ ಸಾಧಿಸಿದ್ದಾರೆ.
ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣೆ; ಕಷ್ಟದ ದಿನಗಳನ್ನು ನೆನೆದು ಡಿಕೆಶಿ ಭಾವುಕ