More

    ಬಿಜೆಪಿಯಿಂದ ಕಾಂಗ್ರೆಸ್ ಯೋಜನೆಗಳು ಹೈಜಾಕ್

    ಬಾಳೆಹೊನ್ನೂರು: ಬಿಜೆಪಿ ಕಾಂಗ್ರೆಸ್​ನ ಅನೇಕ ಯೋಜನೆಗಳನ್ನು ಹೈಜಾಕ್ ಮಾಡುತ್ತಿದ್ದು, ಇದಕ್ಕೆ ಬಿಜೆಪಿ ಗ್ರಾಮ ಸ್ವರಾಜ್ ಸಮಾವೇಶವೇ ಸಾಕ್ಷಿ. ಗ್ರಾಮ ಸ್ವರಾಜ್ ಕಲ್ಪನೆ ರೂವಾರಿ ಮಹಾತ್ಮ ಗಾಂಧೀಜಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್.ಶಂಕರ್ ಹೇಳಿದರು.

    ಜೇನುಗದ್ದೆಯ ಖಾಂಡ್ಯ ಪ್ಲಾಂಟರ್ಸ್ ಕ್ಲಬ್ ಸಭಾಂಗಣದಲ್ಲಿ ಖಾಂಡ್ಯ ಹೋಬಳಿ ಕಾಂಗ್ರೆಸ್ ಶುಕ್ರವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಭಾರತದ ಪ್ರತಿ ಜನರ ಖಾತೆಗೆ 15 ಲಕ್ಷ ರೂ. ಪಾವತಿಸುವ ಹಾಗೂ 2 ಕೋಟಿ ಉದ್ಯೋಗ ಸೃಷ್ಟಿಸುವ ಪ್ರಧಾನಿ ಮೋದಿ ಅವರ ಭರವಸೆ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.

    ವಾಸ್ತವಾಗಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು 1964ರಲ್ಲಿ ಕಾಂಗ್ರೆಸ್ ಜಾರಿಗೆ ತಂದಿದೆ. ಈ ಮಸೂದೆ ಜಾರಿಗೊಳಿಸಿದ್ದು ಕಾಂಗ್ರೆಸ್ ಎಂದು ಏಕೆ ಬಿಂಬಿಸುತ್ತಿಲ್ಲ. ಸರಿಯಾದ ಮಾಹಿತಿ ಇಲ್ಲದ ರಾಜ್ಯ ಬಿಜೆಪಿ ಸರ್ಕಾರದ ಸಚಿವರು ಗೋ ಪೂಜೆ ಮಾಡುತ್ತಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts