ವಿಜಯವಾಣಿ ಸುದ್ದಿಜಾಲ ಗದಗ
BJP ಗದಗ ಜಿಲ್ಲಾ ವತಿಯಿಂದ ವಿಕಸಿತ ಭಾರತ ಲೋಕಸಭಾ ಚುನಾವಣೆ 2024 ನೇ ಪ್ರಣಾಳಿಕೆ ಸಂಕಲ್ಪ ಪತ್ರ ಜನ ಅಭಿಪ್ರಾಯ ಸಂಗ್ರಹವು ಶುಕ್ರವಾರ ನಗರದ ಪ್ರೊಬೊಸ್ ಕ್ಲಬ್ನಲ್ಲಿ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಶಶಿಧರ ದಿಂಡೂರ ಮಾತನಾಡಿ, 2024 ರ ಲೋಕಸಭೆ ಚುನಾವಣೆಯ ಪ್ರಣಾಳಿಕೆಗೆ ದೇಶದ ಪ್ರತಿಯೊಬ್ಬ ನಾಗರಿಕ ಅಭಿಪ್ರಾಯ ಸಂಗ್ರಹ ಕಾರ್ಯ ಸಂಕಲ್ಪ ಪತ್ರ ಅಭಿಯಾನದ ಮೂಲಕ ನಡೆಯುತ್ತಿದ್ದು, ತಮ್ಮ ಅಭಿಪ್ರಾಯಗಳನ್ನು ನಮೋ ಆ್ಯಪ್ ಮೂಲಕ ಕಳುಹಿಸಬಹುದು. 10 ವರ್ಷಗಳ ಕಾಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನ ಔಷದ, ಆಯುಷ್ಮಾನ್ ಭಾರತ, ಹರ್ಗರ್ ಸೌರ ವಿದ್ಯುತ್ ಹೀಗೆ ಅನೇಕ ಯೋಜನೆಗಳನ್ನು ಕೊಟ್ಟು ಭಾರತವನ್ನು ಸುಭದ್ರ ವಹಿಸಿದ್ದಾರೆ ಎಂದರು.
ಜಿಲ್ಲಾ ಪ್ರಕೋಷ್ಠಗಳ ಸಹ ಸಂಯೋಜಕ ರಮೇಶ ಸಜ್ಜಗಾರ ಮಾತನಾಡಿ, ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬ ಪ್ರಜೆಗಳಿಂದ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಸಲಹೆಗಳನ್ನು ಪಡೆಯುತ್ತಿದ್ದಾರೆ. ಈ ಹಿಂದೆ ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತ ಬಂದಿದ್ದಾರೆ. ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ, ದೇಶಾದ್ಯಂತ ರೈಲ್ವೆ ಮಾರ್ಗ, ಮೇಟ್ರೊ, ಒಂದೇ ಭಾರತ, ರೈಲ್ವೆ ನಿಲ್ದಾಣಗಳ ಉನ್ನತಿಕರ್ಣ, ದೇಶಾದ್ಯಂತ ಇಲೇಕ್ಟ್ರೀಕಲ್ ರೈಲುಗಳ ಪರಿವರ್ತನೆ, ಆಟಿರ್ಕಲ್ 370 ರದ್ದತಿ, ವಿಶ್ವದಲ್ಲಿ ಶಕ್ತಿಯು ಆಥಿರ್ಕ ದೇಶವಾಗಿ ಭಾರತ ಮುನ್ನಡೆಯುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಶಿವವ್ವ ಕುರುಡಗಿ, ಪ್ರೋಬೊಸ್ ಕ್ಲಬ್ ಅಧ್ಯ ತೊಟಗೇರ, ಅಶೋಕ ಕೊಡಗಲಿ, ಬಿ. ಬಿ. ಗೌಡ್ರ, ಬಿ. ಎಂ. ಬಿಳೆಯಲಿ, ಆರ್. ಡಿ. ಕಪ್ಲಿ, ಸುರೇಕಾ ಪಿಳ್ಳಿ ಹಲವರು ಇದ್ದರು.