More

    ಚುರುಕುಗೊಂಡ ಬಿಜೆಪಿ ಚುನಾವಣಾ ಪ್ರಚಾರ

    ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಮತದಾನ ದಿನ ಸಮೀಪಿಸುತ್ತಿದ್ದಂತೆ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಚಾರ ಮತ್ತಷ್ಟು ಬಿರುಸುಗೊಂಡಿದೆ.

    ನಿತ್ಯ ವಿಧಾನಸಭೆ ಕ್ಷೇತ್ರವಾರು ಬಿಡುವಿಲ್ಲದ ಪ್ರಚಾರದಲ್ಲಿ ಪ್ರಲ್ಹಾದ ಜೋಶಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ತೊಡಗಿದ್ದಾರೆ.

    ಹಾವೇರಿ ಜಿಲ್ಲೆಯ ಶಿಗ್ಗಾಂವಿ, ಸವಣೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಧಾರವಾಡ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಸಚಿವ ಪ್ರಲ್ಹಾದ ಜೋಶಿ ಮತ್ತು ಸ್ಥಳೀಯ ಶಾಸಕರು, ಬಿಜೆಪಿ, ಜೆಡಿಎಸ್ ಪ್ರಮುಖರು, ಬೆಂಬಲಿಗ ಕಾರ್ಯಕರ್ತರು ಪ್ರಚಾರ ನಡೆಸುತ್ತಿದ್ದಾರೆ.

    ಕ್ಷೇತ್ರದ ವಿವಿಧ ಹಳ್ಳಿಗಳಲ್ಲಿ ಬಹಿರಂಗ ಪ್ರಚಾರ ಸಭೆ, ರೋಡ್ ಶೋ ನಡೆಸಿ, ಮತಯಾಚಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ರಾಷ್ಟ್ರ ಮತ್ತು ರಾಜ್ಯ ನಾಯಕರು ಸಹ ಕಾರ್ಯಕರ್ತರ ಸಭೆ, ಸಮುದಾಯಗಳ ಸಮಾವೇಶಗಳನ್ನು ನಡೆಸಿ, ಬಿಜೆಪಿ ಪರ ಅಲೆ ಕಾಯ್ದುಕೊಳ್ಳುವಲ್ಲಿ ಮುಂದಾಗಿದ್ದಾರೆ.

    ಸೋಮವಾರ, ಮಂಗಳವಾರ ಶಿಗ್ಗಾಂವಿ- ಸವಣೂರು ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಪಕ ಪ್ರಚಾರ ನಡೆಸಿದ ಪ್ರಲ್ಹಾದ ಜೋಶಿ, ಬುಧವಾರ ನವಲಗುಂದ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಹಾಗೂ ಗುರುವಾರ ಕಲಘಟಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದರು.

    ಕಲಘಟಗಿ ವಿಧಾನಸಭಾ ಕ್ಷೇತ್ರದ ಮನಗುಂಡಿ ಹಾಗೂ ಹಳ್ಳಿಗೇರಿ ಗ್ರಾಮಗಳಲ್ಲಿ ಗುರುವಾರದಂದು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಪ್ರಲ್ಹಾದ ಜೋಶಿ, ಸ್ವಾತಂತ್ರ್ಯ ನಂತರದಲ್ಲಿ ಭಾರತ ಈಗೀಗ ಅಭಿವೃದ್ಧಿ ಪಥದತ್ತ ಮುನ್ನಡೆಯುತ್ತಿದೆ ಎಂದು ಹೇಳಿದರು.

    ಕಳೆದ ಹತ್ತು ವರ್ಷದ ಅವಧಿಯಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ದೇಶ 5ನೇ ಆರ್ಥಿಕ ಶಕ್ತಿಯಾಗಿ ಹೊರ ಹೊಮ್ಮಿದೆ. ಮೋದಿ ಅವರ ಮೂರನೇ ಅವಧಿಯಲ್ಲಿ ಮೂರನೇ ಆರ್ಥಿಕ ಬಲಿಷ್ಠ ಭಾರತವಾಗಿ ಜಗತ್ತಿನೆದುರು ನಿಲ್ಲಲಿದೆ ಎಂದು ಜೋಶಿ ಪ್ರತಿಪಾದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts