ಮಂಡ್ಯ: ಚುನಾವಣೆಯಲ್ಲಿ ಬೆಂಬಲಿಗರಿಗೆ ಹಣ ಕೊಟ್ಟು ಮಾಜಿ ಸಚಿವರೊಬ್ಬರು ಮೋಸ ಹೋಗಿದ್ದಾರಾ ಎಂಬ ವಿಚಾರ ಅವರ ಮಾತಿನಿಂದಲೇ ಹೊರಬಿದ್ದಿದೆ. ಈ ಮಾಜಿ ಸಚಿವರಿಂದ ಮತದಾರರಿಗೆ ಹಂಚಲು ಪಡೆದಿದ್ದ ಹಣವನ್ನು ಹಂಚದ ಆಪ್ತರೇ ಮೋಸ ಮಾಡಿದ್ದಾರೆ!
ನಿನ್ನೆ ನಡೆದ ಕೃತಜ್ಞತಾ ಸಭೆಯಲ್ಲಿ ಕೆ.ಆರ್.ಪೇಟೆ ಬಿಜೆಪಿ ಪರಾಜಿತ ಅಭ್ಯರ್ಥಿ ಕೆ.ಸಿ.ನಾರಾಯಣಗೌಡ ಸತ್ಯ ಬಾಯ್ಬಿಟ್ಟಿದ್ದಾರೆ. ಸೋಲಿನ ಬಳಿಕ ಹಣ ವಾಪಾಸ್ ನೀಡುವಂತೆ ನಾರಾಯಣಗೌಡ ಮನವಿ ಮಾಡಿದ್ದು “ಮತದಾರರಿಗೆ ಹಂಚಿಕೆ ಮಾಡದೆ ಇಟ್ಟುಕೊಂಡಿರುವ ಹಣ ವಾಪಸ್ ಕೊಟ್ಟುಬಿಡಿ ಎಂದು ಸಭೆಯಲ್ಲಿ ಅಂಗಲಾಚಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಮತದಾರರಿಗೆ ಹಣ ಹಂಚದೆ ಆಪ್ತರಿಂದಲೇ ಮೋಸ? ಸತ್ಯ ಬಾಯ್ಬಿಟ್ಟ ಕೆ.ಆರ್.ಪೇಟೆ ಬಿಜೆಪಿ ಪರಾಜಿತ ಅಭ್ಯರ್ಥಿ!#krpete #election #bjp #exmla #mandya #kannadanews #latestnews #money #narayanagowda #vijayavanihttps://t.co/FYbLLpSYDr pic.twitter.com/IxeE4807A1
— Vijayavani (@VVani4U) May 22, 2023
ಸೋಲಿನ ಬಳಿಕ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿ ನಾರಾಯಣಗೌಡ, “ಹಲವು ಕಡೆಗಳಿಗೆ ನಮ್ಮ ಹಣ ತಲುಪಿಲ್ಲ ಎಂಬ ಮಾಹಿತಿಯನ್ನು ನಾನು ಪಡೆದಿದ್ದೇನೆ. ಹಣ ಹಂಚಿಕೆ ಮಾಡದೆ ಇಟ್ಟು ಕೊಂಡಿದ್ರೆ ದಯವಿಟ್ಟು ವಾಪಾಸ್ ಕೊಡಿ. ಟ್ರಸ್ಟ್ ಸ್ಥಾಪಿಸಿ ಆ ಹಣವನ್ನು ಸಮಾಜಸೇವೆಗೆ ಉಪಯೋಗಿಸೋಣ” ಎಂದು ಹಣ ಪಡೆದು ಮೋಸ ಮಾಡಿದ ಮುಖಂಡರಿಗೆ ನಾರಾಯಣಗೌಡ ಮನವಿ ಮಾಡಿದ್ದಾರೆ.