ಹುಮನಾಬಾದ್: ಬಿಜೆಪಿ ಜಯಭೇರಿಗೆ ಕಾರ್ಯಕರ್ತರ ಪರಿಶ್ರಮವೇ ಜೀವಾಳವಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಅತಿ ಹೆಚ್ಚು ಮತಗಳಿಂದ ಕೇಸರಿಪಡೆ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಹುಡಗಿ ಗ್ರಾಮದ ನಿಸರ್ಗ ಕಲ್ಯಾಣ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಕ್ಷದ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ದಶಕದಲ್ಲಿ ಭಾರತ ವಿಶ್ವದಾದ್ಯಂತ ತನ್ನ ಛಾಪು ಮೂಡಿಸಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ವಿಶ್ವಗುರು ಭಾರತದ ಮುನ್ನುಡಿ ಬರೆದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮುಂದೆಯೂ ಗೆದ್ದು ಭಾರತದ ಯಶಸ್ಸಿಗೆ ಶ್ರಮಿಸಬೇಕಿದೆ. ಹೀಗಾಗಿ ಕಾರ್ಯಕರ್ತರು ಸಂಘಟನಾತ್ಮಕ ಮತ್ತು ಕಾರ್ಯಶೀಲರಾಗಿ ಕೆಲಸ ಮಾಡಬೇಕೆಂದು ಹೇಳಿದರು.
ಸಭೆ ಉದ್ಘಾಟಿಸಿದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್ ಮಾತನಾಡಿ, ದೇಶದ ಹಿತರಕ್ಷಣೆ ಮತ್ತು ಅಭಿವೃದ್ಧಿಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರಿಯಬೇಕೆಂದು ಇಡೀ ದೇಶ ಬಯುಸುತ್ತಿದೆ. ಹೀಗಾಗಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಸಿದ್ಧ ಎಂದರು.
ಪಕ್ಷದ ನಿಕಟಪೂರ್ವ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಅಭಿಮನ್ಯು ನಿರಗುಡಿ, ಅಂಬೇಡ್ಕರ್ ನಿಗಮ ಮಂಡಳಿ ಮಾಜಿ ನಿರ್ದೇಶಕ ಬಸವರಾಜ ಆರ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿರಣ ಪಾಟೀಲ್, ಪೀರಪ್ಪ ಯರನಳ್ಳಿ, ಮಾಧವ ಹೊಸೂರೆ, ಜಿಲ್ಲಾ ಉಪಾಧ್ಯಕ್ಷ ವಿಶ್ವನಾಥ ಪಾಟೀಲ್ ಮಾಡಗೂಳ, ಲೋಕಸಭೆ ಚುನಾವಣೆ ಜಿಲ್ಲಾ ಸಂಚಾಲಕ ಅರಹಂತ ಸಾವಳೆ, ಮಹಿಳಾ ಘಟಕದ ಅಧ್ಯಕ್ಷೆ ಮಾಯಾವತಿ ಸಿಂಧನಕೇರಾ ಮಾತನಾಡಿದರು.
ಮಂಡಲ ಅಧ್ಯಕ್ಷ ಪ್ರಭಾಕರ ನಾಗರಾಳೆ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಅನೀಲ ಪಸಾರ್ಗಿ, ರಾಜಕುಮಾರ ಭಂಡಾರಿ, ಪ್ರಮುಖರಾದ ಸಂತೋಷ ಪಾಟೀಲ್, ಕರಬಸಪ್ಪ ಕಲ್ಲೂರ, ಮಲ್ಲಿಕಾರ್ಜುನ ಕುಂಬಾರ, ಅಶೋಕ ಹೊಕ್ರಾಣೆ, ಕೆ.ಎಂ. ಗಜೇಂದ್ರ, ಹಣಮಂತರಾವ ಪಾಟೀಲï, ಗಿರೀಶ ತುಂಬಾ, ಮಧುಕರ ಹಿಲಾಲಪುರ, ರವಿ ಹೊಸಳ್ಳಿ ಇತರರಿದ್ದರು.