More

    ದೇಶದ ಭದ್ರತೆಗೆ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ

    ತಿ.ನರಸೀಪುರ: ಈವರೆಗೆ ದೇಶದಲ್ಲಿ 70 ವರ್ಷ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಆದರೆ, 10 ವರ್ಷಗಳಲ್ಲಿ ಪ್ರಧಾನಿ ದೇಶವನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಡಾ.ರೇವಣ್ಣ ಹೇಳಿದರು.


    ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಸ್.ಬಾಲರಾಜ್ ಪರ ಬುಧವಾರ ತಾಲೂಕಿನ ತಲಕಾಡು ಗ್ರಾಮದಲ್ಲಿ ಮತಯಾಚಿಸಿ ಮಾತನಾಡಿದ ಅವರು, 10 ವರ್ಷಗಳಿಂದ ಆಡಳಿತ ನಡೆಸಿದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಕ್ಷೇತ್ರಗಳಲ್ಲಿಯೂ ಸಮಾನವಾದ ಅವಕಾಶ ಕಲ್ಪಿಸಿದೆ. ವಿಶ್ವ ಮಟ್ಟದಲ್ಲಿ ದೇಶದ ಗೌರವವನ್ನು ಹೆಚ್ಚಿಸುವಂತಹ ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದೆ. ಆಡಳಿತಾತ್ಮಕವಾಗಿ ತೆಗೆದುಕೊಂಡ ನಿರ್ಧಾರಗಳಿಂದ ದೇಶದ ಜನರು ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ. ಹಾಗಾಗಿ ದೇಶದ ಭದ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗುವುದು ಅನಿವಾರ್ಯವಾಗಿದೆ ಎಂದರು.


    ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಾಲರಾಜ್ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು 20 ವರ್ಷಗಳಿಂದ ಜನರ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಜನರ ನಡುವೆ ಇರುವಂತಹ ಬಾಲರಾಜ್ ಅವರನ್ನು ಕ್ಷೇತ್ರದ ಜನತೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
    ಬಿಜೆಪಿ ಕ್ಷೇತ್ರಾಧ್ಯಕ್ಷ ಶಿವಕುಮಾರ್, ನಿಕಟಪೂರ್ವ ಅಧ್ಯಕ್ಷ ಕೆ.ಸಿ.ಲೋಕೇಶ್ ನಾಯಕ್, ಕರೋಹಟ್ಟಿ ಬಸವರಾಜು, ಮರಿಸ್ವಾಮಿ, ಎಸ್‌ಎಂಆರ್ ಪ್ರಕಾಶ್, ಮಾದೇಶ್, ಶಶಿಕುಮಾರ್, ಶೇಖರಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts