More

    ಉದ್ಯೋಗ ಸೃಷ್ಟಿಯ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧ; ಸಿಎಂ ಬೊಮ್ಮಾಯಿ

    ಬೆಂಗಳೂರು: ಸರ್ಕಾರ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದು, ಇದಕ್ಕಾಗಿ ವಿವಿಧ ಯೋಜನೆಗಳು ಸಧ್ಯದಲ್ಲೇ ಅನುಷ್ಟಾನಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    ನ.19ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಕೆಂಪೇಗೌಡ ಥೀಮ್​ ಪಾರ್ಕ್​ ಉದ್ಘಾಟನೆ ಮಾಡಲಾಗುತ್ತದೆ. ಕಾರವಾರದಲ್ಲಿ 280 ಕೋಟಿ ರೂ.ನಲ್ಲಿ ಬಂದರು ನಿರ್ಮಾಣವಾಗುತ್ತಿದೆ. ಕಿತ್ತೂರು ಕರ್ನಾಟದಕದ ಅಭಿವೃದ್ಧಿಗೆ ಇಂಡಸ್ಟ್ರಿಯಲೈಜೇಶನ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ದಾವಣಗೆರೆ, ಶಿವಮೊಗ್ಗ, ರಾಯಚೂರಿನಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಜತೆಗೆ ರಾಜ್ಯದಲ್ಲಿ 3 ಸಾವಿರ ಕೋಟಿ ರೂ. ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ಈ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts