ನವದೆಹಲಿ: ಬಿಜೆಪಿ ಪಕ್ಷದಲ್ಲಿ ಬುಧವಾರದಂದು ನಾಟಕೀಯ ಬೆಳವಣಿಗೆಯೊಂದು ನಡೆದಿದೆ. ಶಾಹೀನ್ಬಾಗ್ ಪ್ರತಿಭಟನೆ ವೇಳೆ ಗುಂಡು ಹಾರಿಸಿ ಜೈ ಸೇರಿದ್ದ ವ್ಯಕ್ತಿಯನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದ್ದು, ಕೆಲವೇ ಗಂಟೆಗಳಲ್ಲಿ ಆತನನ್ನು ಉಚ್ಛಾಟನೆ ಮಾಡಲಾಗಿದೆ.
ಇದನ್ನೂ ಓದಿ: ಮಗನ ಹೆಂಡತಿಗೆ ಮಾವ ಹೀಗಾ ಮಾಡೋದು?! ತನಿಖೆಯಲ್ಲಿ ಬಯಲಾಯಿತು ಮಾವನ ನಿಜ ಬಣ್ಣ
ಫೆಬ್ರವರಿಯಲ್ಲಿ ಶಾಹೀನ್ಬಾಗ್ನಲ್ಲಿ ಸಿಎಎ ವಿರೋಧಿಸಿ ನಡೆಸಲಾಗುತ್ತಿದ್ದ ಪ್ರತಿಭಟನೆಯಲ್ಲಿ ಕಪಿಲ್ ಗುರ್ಜರ್ ಹೆಸರಿನ ವ್ಯಕ್ತಿ ಗುಂಡು ಹಾರಿಸಿದ್ದ. ಅದಕ್ಕಾಗಿ ಆತನನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ನಂತರ ಆತ ಜಾಮೀನಿನ ಮೇಲೆ ಹೊರಬಂದಿದ್ದ. ಅದೇ ವ್ಯಕ್ತಿ ಇಂದು ಗಾಜಿಯಾಬಾದ್ ಜಿಲ್ಲಾ ಬಿಜೆಪಿ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾನೆ.
ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಎಸ್ಡಿಪಿಐ ಬೆಂಬಲಿಗರು
ಕಪಿಲ್ ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಆತನನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವುದಾಗಿ ಪಕ್ಷ ಹೇಳಿಕೊಂಡಿದೆ. ಮೇಲ್ದರ್ಜೆಯ ನಾಯಕರು ಗಾಜಿಯಾಬಾದ್ನ ನಾಯಕರಿಗೆ ಕಪಿಲ್ ಪಕ್ಷ ಸೇರಿದ್ದರ ಕುರಿತಾಗಿ ತರಾಟೆ ತೆಗೆದುಕೊಂಡಿದ್ದು, ಅದೇ ಹಿನ್ನೆಲೆಯಲ್ಲಿ ಆತನನ್ನು ಪಕ್ಷದಿಂದ ತೆಗೆದಿರುವುದಾಗಿ ಹೇಳಲಾಗಿದೆ. ಕಪಿಲ್ನ ಬಗ್ಗೆ ತಿಳಿಯದೆಯೇ ಆತನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದು, ತಪ್ಪಾಗಿರುವುದಾಗಿ ಜಿಲ್ಲಾ ನಾಯಕರು ಮೇಲಿನ ನಾಯಕರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್)
ಸರ್ಪೈಸ್ ನೀಡಲು ಮನೆಗೆ ಬಂದ ಗಂಡನಿಗೆ ಕಾದಿತ್ತು ಬಿಗ್ ಶಾಕ್! ಹೆಂಡತಿಯ ಇನ್ನೊಂದು ರೂಪ ನೋಡಿದ ಗಂಡ ಮಾಡಿದ್ದೇನು?
ಹೆಂಡತಿಯ ಸೀಮಂತಕ್ಕೆ ಸಿದ್ಧತೆ ನಡೆಸುತ್ತಿದ್ದ ಗಂಡ ರಸ್ತೆಯಲ್ಲೇ ಬಲಿಯಾದ! ಮಗನ ಜತೆ ತಾಯಿಯೂ ದುರ್ಮರಣ