ನವದೆಹಲಿ: ಸಂಸತ್ ಅಧಿವೇಶನದ ವೇಳೆ ಬಿಎಸ್ಪಿ ಸದಸ್ಯ ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಕೋಮು ಹೇಳಿಕೆ ನೀಡಿರುವ ಬಿಜೆಪಿ ಸಂಸದ ರಮೇಶ್ ಬಿಧೂರಿ ವಿಪಕ್ಷ ಹಾಗೂ ಸ್ವಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇತ್ತ ತಮ್ಮ ಹೇಳಿಕೆಗೆ ವಿವರಣೆ ನೀಡುವಂತೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಗುರುವಾರ ಚಂದ್ರಯಾನ-3ರ ಮೇಲಿನ ಚರ್ಚೆ ನಡೆಯುತ್ತಿದ್ದ ವೇಳೆ ಮಾತನಾಡಿದ್ದ ರಮೇಶ್ ಬಿಧೂರಿ ಬಿಎಸ್ಪಿ ಸಂಸದ ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ್ದರು. ಇವರ ಹೇಳಿಕೆ ಸಾಕಷ್ಟು ಖಂಡನೆಗೆ ಗುರಿಯಾಗಿತ್ತು ಮತ್ತು ಬಿಜೆಪಿ ಸದಸ್ಯನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂಬ ಆಗ್ರಹ ಕೇಳಿ ಬಂದಿತ್ತು.
ಸಂಸದ ರಮೇಶ್ ವಿರುದ್ಧ ವ್ಯಾಪಕ ದೂರು ಹಾಗೂ ಆಕ್ರೋಶ ವ್ಯಕ್ತವಾದ ಹಿನ್ನೆಲಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಬಿಜೆಪಿ ತಾವು ನೀಡಿರುವ ಹೇಳಿಕೆಗೆ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಒಂದು ವೇಳೆ ಸರಿಯಾದ ಸಮಯಕ್ಕೆ ಉತ್ತರಿಸಿದಿದ್ದಲ್ಲಿ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಬಹುಕೋಟಿ ವಂಚನೆ ಪ್ರಕರಣ; ಚಂದ್ರಬಾಬು ನಾಯ್ಡುಗೆ ಸದ್ಯಕ್ಕಿಲ್ಲ ರಿಲೀಫ್
ಈ ಕುರಿತು ಲೋಕಸಬೆ ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದಿರುವ ಸಂಸದ ಡ್ಯಾನಿಶ್ ಅಲಿ ನೂತನ ಸಂಸತ್ ಭವನದಲ್ಲಿ ನಿಮ್ಮ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದಲ್ಲಿ ಚುನಾಯಿತ ಜನಪ್ರತಿನಿಧಿಯೊಬ್ಬನಿಗೆ ಈ ರೀತಿಯ ಮಾತುಗಳನ್ನಾಡಿರುವುದು ತುಂಬಾ ನೋವಾಗಿದೆ. ಇದಕ್ಕೆ ಸಂಬಂಧಿಸಿದಂತೆ ನೀವು ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಚುನಾಯಿತ ಜನಪ್ರತಿನಿಧಿಯಾಗಿ ನನ್ನಗೆ ಈ ರೀತಿಯ ಪರಿಸ್ಥಿತಿ ಇರಬೇಕಾದರೆ ಇನ್ನೂ ಸಾಮಾನ್ಯರ ಕಥೆಯೇನು. ಈ ಸಂಬಂಧ ಲೋಕಸಭೆಯ್ ಅಧ್ಯಕ್ಷರಾದ ನೀವು ವಿಚಾರಣೆ ನಡೆಸಿ ನನಗೆ ನ್ಯಾಯ ಕೊಡಿಸುತ್ತೀರಾ ಎಂಬ ವಿಶ್ವಾಸವಿದೆ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.