ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾನುವಾರ ಮಣಿಪುರದ ಇಂಫಾಲ್ನಿಂದ ಆರಂಭವಾಗಿರುವ ಭಾರತ ಜೋಡೋ ನ್ಯಾಯ ಯಾತ್ರೆಯ ವಿರುದ್ಧ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ. ಮೊದಲು ಕಾಂಗ್ರೆಸ್ ನಾಯಕರಿಗೆ ನ್ಯಾಯ ಒದಗಿಸಿ ಎಂದು ಕೈ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಗುಡುಗಿದೆ.
ಇದನ್ನೂ ಓದಿ:55 ವರ್ಷದ ಕಾಂಗ್ರೆಸ್ ಸಂಬಂಧ ಮುರಿದುಕೊಂಡ ಮಿಲಿಂದ್ ದೇವರಾ; ಶಿಂಧೆ ಬಣದ ಶಿವಸೇನಾ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ನ ಹಿರಿಯ ನಾಯಕ ಮಿಲಿಂದ್ ದೇವರಾ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿರುವುದನ್ನೇ ಗುರಿಯಾಗಿಸಿಕೊಂಡು ಬಿಜೆಪಿ ಐಟಿ ಸೆಲ್ ವಾಗ್ದಾಳಿ ನಡೆಸಿದೆ. ಮೊದಲು ಕಾಂಗ್ರೆಸ್ ನಾಯಕರಿಗೆ ನ್ಯಾಯ ಒದಗಿಸಿ ತದನಂತರ ನ್ಯಾಯ ಯಾತ್ರೆ ಕೈಗೊಳ್ಳಿ ಎಂದು ಗುಡುಗಿದ್ದಾರೆ.
ಕಾಂಗ್ರೆಸ್ ಭಾರತ ಜೋಡೋ ನ್ಯಾಯ ಯಾತ್ರೆ ಕೈಗೊಂಡ ಮೊದಲ ದಿನವೇ ಕಾಂಗ್ರೆಸ್ನ ಹಿರಿಯ ನಾಯಕ ಮಿಲಿಂದ್ ದೇವರಾ ಅವರು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ಕುಟುಂಬ ಹೊಂದಿದ್ದ 55 ವರ್ಷದಷ್ಟು ಹಳೆಯ ಸಂಬಂಧ ಅಂತ್ಯವಾಗುತ್ತಿದೆ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಲುಂಗಿ ಧರಿಸಿ, ಹಸುವಿಗೆ ಪೂಜೆ ಮಾಡಿ ಪೊಂಗಲ್ ಸೆಲೆಬ್ರೇಟ್ ಮಾಡಿದ ಪ್ರಧಾನಿ ಮೋದಿ