ಕೊಪ್ಪಳ: ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದಾಗ ಸಂಭವಿಸಿದ್ದ ಬೆಳವಣಿಗೆ ಮೂರನೇ ಪಟ್ಟಿ ಬಿಡುಗಡೆ ಸಂದರ್ಭದಲ್ಲೂ ಉಂಟಾಗಿದ್ದು, ಪಕ್ಷದ ಇನ್ನೊಬ್ಬ ನಾಯಕ ಸದ್ಯದಲ್ಲೇ ರಾಜೀನಾಮೆ ನೀಡುವ ನಿರ್ಧಾರ ಘೋಷಿಸಿದ್ದಾರೆ.
ಇದನ್ನೂ ಓದಿ: ಹವಾಮಾನ ಮುನ್ಸೂಚನೆ: ಮುಂದಿನ 5 ದಿನ ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?
ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ನ ಪ್ರಬಲ ಆಕಾಂಕ್ಷಿ ಆಗಿರುವ ಸಿ.ವಿ.ಚಂದ್ರಶೇಖರ್, ಇದೀಗ ಟಿಕೆಟ್ ಸಿಗದ್ದರಿಂದ ಬೇಸರಗೊಂಡು ಪಕ್ಷಕ್ಕೆ ರಾಜೀನಾಮೆ ನೀಡಲಿರುವುದಾಗಿ ಹೇಳಿದ್ದಾರೆ. ಸಂಸದ ಕರಡಿ ಸಂಗಣ್ಣನ ಸೊಸೆ ಮಂಜುಳಾ ಅಮರೇಶ್ ಕರಡಿಗೆ ಈ ಕ್ಷೇತ್ರದ ಟಿಕೆಟ್ ಸಿಕ್ಕಿದೆ.
ಇದನ್ನೂ ಓದಿ: ಅಮ್ಮನ ವಿರುದ್ಧ ದೂರು ಹೇಳಲು 130 ಕಿ.ಮೀ. ದೂರದ ಅಜ್ಜಿ ಮನೆಗೆ ಸೈಕಲ್ನಲ್ಲೇ ಹೋದ ಹುಡುಗ!
ತಾನು ನಿರೀಕ್ಷೆ ಮಾಡಿದ್ದ ಟಿಕೆಟ್ ತಪ್ಪಿ ಹೋಗಿದ್ದರಿಂದ ತೀವ್ರ ಮನನೊಂದಿರುವ ಚಂದ್ರಶೇಖರ್, ಪಕ್ಷಕ್ಕೆ ರಾಜೀನಾಮೆ ನೀಡಲು ಬೆಂಗಳೂರಿಗೆ ಹೊರಟಿದ್ದಾರೆ. ಬಿಜೆಪಿ ಟಿಕೆಟ್ ಸಿಗದಿದ್ದರೂ ಈ ಸಲದ ಚುನಾವಣೆಗೆ ಸ್ಪರ್ಧಿಸುವುದು ಖಚಿತ ಎಂದಿರುವ ಅವರು, ರಾಜೀನಾಮೆ ನೀಡಿದ ಬಳಿಕ ಮುಂದಿನ ತೀರ್ಮಾನ ತಿಳಿಸುವುದಾಗಿ ಹೇಳಿದ್ದಾರೆ.
ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ; ಮಾಜಿ ಪ್ರಧಾನಿ ಮೊಮ್ಮಗನ ವಾರ್ಷಿಕ ಆದಾಯ ಇಷ್ಟು!
ಶಾಲಾ ಮಕ್ಕಳಿಗೆ ಎಷ್ಟು ದಿನ ರಜೆ?: ಇಲ್ಲಿದೆ ವೇಳಾಪಟ್ಟಿಯ ಪೂರ್ತಿ ವಿವರ