More

    ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ಮುಖಂಡ!

    ಬೆಂಗಳೂರು: ದೇಶಾದ್ಯಂತ ಜನರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ, ಹಠಾತ್ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಬಿಜೆಪಿ ಮುಖಂಡರೊಬ್ಬರು ಪಕ್ಷದ ಕಚೇರಿಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ

    ಚಿತ್ರದುರ್ಗದ ಹಿರಿಯೂರು ತಾಲೂಕಿನ ಸಿದ್ದೇಶ್ ಯಾದವ್ (49) ಹೃದಯಾಘಾತದಿಂದಾಗಿ ಸಾವಿಗೀಡಾದ ಬಿಜೆಪಿ ಮುಖಂಡ. ಇವರು ಚಿತ್ರದುರ್ಗ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ, ಬಳ್ಳಾರಿ ವಿಭಾಗದ ಪ್ರಭಾರಿ, ಹಿಂದುಳಿದ ವರ್ಗಗಳ ಮುಖಂಡರೂ ಆಗಿದ್ದರು. ಇಂದು ಮಧ್ಯಾಹ್ನ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಈ ಘಟನೆ ಸಂಭವಿಸಿದೆ.

    ಇದನ್ನೂ ಓದಿ: ಖ್ಯಾತ ವಕೀಲ ಸಿ.ವಿ.ನಾಗೇಶ್ ಪುತ್ರ ಅರುಣ್ ಅವಧಾನಿ ಹೃದಯಾಘಾತದಿಂದ ನಿಧನ

    ಜಿಲ್ಲಾ ಪ್ರಭಾರಿಗಳ ಸಭೆಗಾಗಿ ಇವರು ಆಗಮಿಸಿದ್ದರು. ಪಕ್ಷದ ಸಭೆ ಮುಗಿಸಿ ಹೊರ ಬರುವಾಗ ಇವರು ಹೃದಯಾಘಾತಕ್ಕೆ ಒಳಗಾಗಿ ಕುಸಿದು ಬಿದ್ದರು. ಕೂಡಲೇ ಇವರನ್ನು ಹತ್ತಿರದ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಾರ್ಗಮಧ್ಯೆ ಕೊನೆಯುಸಿರೆಳೆದರು.

    ‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ

    ‘ಲವ್ ಮಾಡು’ ಎಂದು ಟೀಚರ್ ಮಗನ ಕಾಟ, ಆತನಿಗೆ ಅಮ್ಮನ ಬೆಂಬಲ?: ಸಾವಿಗೆ ಶರಣಾದ್ಲು ಹತ್ತನೇ ತರಗತಿ ವಿದ್ಯಾರ್ಥಿನಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts