More

    ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶ | ಕೇಸರಿ ಬಣ್ಣದ ಬ್ಲೌಸ್ ಪೀಸ್​​ಗಾಗಿ ಮುಗಿಬಿದ್ದ ಮಹಿಳೆಯರು!

    ವಿಜಯಪುರ: ನಗರದ ಸಾಯಿ ವಿಹಾರದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದ ವೇಳೆ ಬ್ಲೌಸ್​ ಪೀಸ್​ಗಾಗಿ ತಳ್ಳಾಟ ನಡೆದಿದೆ. ಸಮಾವೇಶದ ಕಾರಣದಿಂದ ಕೇಸರಿ ಬಣ್ಣ ಸೇರಿದಂತೆ ವಿವಿಧ ಬಣ್ಣಗಳ ಬ್ಲೌಸ್ ಪೀಸ್ ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ತಾ ಮುಂದು… ನಾ ಮುಂದು… ಎಂದು ಮಹಿಳೆಯರ ನಡುವೆ ನೂಕಾಟ ನಡೆದಿದೆ.

    ಕೇಂದ್ರ ಸಚಿವೆ, ಹಿಂದೂ ನಾಯಕಿ ಸಾಧ್ವಿ ನಿರಂಜನ ಜ್ಯೋತಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದಲ್ಲಿ ಮಹಿಳಾ ಸಮಾವೇಶ ನಡೆದಿದೆ. ಸಮಾವೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

    ಇದನ್ನೂ ಓದಿ: ಪಾರ್ಕಿಂಗ್ ವಿಚಾರ ಪ್ರಶ್ನಿಸಿದ್ದಕ್ಕೆ ನಟಿ ಸಂಜನಾಗೆ ಕೊಲೆ ಬೆದರಿಕೆ; ಎಫ್​ಐಆರ್ ದಾಖಲು

    ಕಾರ್ಯಕ್ರಮದಲ್ಲಿ ಸಾಧ್ವಿ ನಿರಂಜನ ಜ್ಯೋತಿ ಮಾತನಾಡುತ್ತಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುಧ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎರಡು ಸಾವಿರ ನಿಡೋದಾಗಿ ಹೇಳಿದ್ದಾರೆ. ನಿಮ್ಮದೇ ಸರ್ಕಾರ ಅಧಿಕಾರದಲ್ಲಿರುವ ಬೇರೆ ರಾಜ್ಯದಲ್ಲಿ ಯಾಕೆ ಈ ಯೋಜನೆ ಜಾರಿಗೆ ತಂದಿಲ್ಲ. ರಾಹುಲ್ ಗಾಂಧಿ ದೇಶ ಜೋಡೋ ಯಾತ್ರೆ ಮಾಡ್ತಾರೆ. ಆದರೆ ದೇಶ ಒಡೆದಿರುವುದು ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಅವಧಿಯಲ್ಲಿ ಆಗದ ಕೆಲಸಗಳನ್ನು ಮೋದಿ ಎಂಟು ವರ್ಷದಲ್ಲಿ ಮಾಡಿದ್ದಾರೆ. ಮೋದಿ ಅವರ ಆಡಳಿತ ನೋಡಿ ಕಾಂಗ್ರೆಸ್ ನಾಯಕರು ಕಲಿಯಬೇಕಿದೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ರೈಲ್ವೇ ನಿಲ್ದಾಣದಲ್ಲಿ ಶವ ಪತ್ತೆ ಪ್ರಕರಣ | ಮೂವರ ಬಂಧನ; ಪೊಲೀಸರಿಗೆ ಹಂತಕರ ಸುಳಿವು ನೀಡಿದ್ದು ಡ್ರಮ್ ಮೇಲಿದ್ದ ಸ್ಟಿಕ್ಕರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts