ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್ ನೆಟ್ಟಾರ್ ಕೊಲೆಯ ಬೆನ್ನಿಗೆ ಬಿಜೆಪಿ ಕಾರ್ಯಕರ್ತರ ವಲಯದಲ್ಲಿ ತೀವ್ರ ಸಂಚಲನ ಉಂಟಾಗಿದ್ದು, ಆಡಳಿತ ಪಕ್ಷದ ವಿರುದ್ಧ ಭಾರಿ ಅಸಮಾಧಾನ ವ್ಯಕ್ತವಾಗಿದೆ. ಅಲ್ಲದೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಲಾರಂಭಿಸಿದ್ದು, ಅದು ಚಳವಳಿ ರೂಪ ತಳೆದಿದೆ.
ಹೀಗೆ ಕಾರ್ಯಕರ್ತರೇ ತಮ್ಮ ಪಕ್ಷದ ಸರ್ಕಾರದ ವಿರುದ್ಧ ಅಸಮಾಧಾನ, ಅಸಹಾಯಕತೆಯ ಜತೆಗೆ ತೀವ್ರ ಬೇಸರವನ್ನೂ ವ್ಯಕ್ತಪಡಿಸಿದ್ದರೆ, ಇತ್ತ ಆಳುವ ಪಕ್ಷದ ಶಾಸಕರೊಬ್ಬರೂ ಪ್ರವೀಣ್ ಹತ್ಯೆಯ ವಿಚಾರವಾಗಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಹೇಳಲು ನಾಚಿಕೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ. ಕುಮಾರಸ್ವಾಮಿಯವರು ತಮ್ಮ ಫೇಸ್ಬುಕ್ ಪೇಜ್ನಲ್ಲಿ ಸ್ಟೇಟಸ್ ಮೂಲಕ ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. “ನಮ್ಮದೇ ಸರ್ಕಾರ!, ನಮ್ಮದೇ ಕಾರ್ಯಕರ್ತರ ಕೊಲೆ!, ನನಗೆ ಹೇಳಿ ಕೊಳ್ಳಲು ನಾಚಿಕೆಯಾಗುತ್ತಿದೆ! ಕ್ಷಮಿಸಿ ಬಿಡು ಪ್ರವೀಣ್..” ಎಂಬುದಾಗಿ ಅವರು ಪೋಸ್ಟ್ ಮಾಡಿದ್ದಾರೆ.
ನನ್ನ ಪತಿಯ ಆತ್ಮಹತ್ಯೆಗೆ ಈಶ್ವರಪ್ಪನವರೇ ಕಾರಣ ಎಂದು ನಾನೂ ಆತ್ಮಹತ್ಯೆ ಮಾಡಿಕೊಳ್ಳುವೆ: ರೇಣುಕಾ ಪಾಟೀಲ